ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ : : ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ -Vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ..

ಕೇವಲ ಸುಳ್ಳು ಆಶ್ವಾಸನೆ, ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ.. : ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ -Vishwanews24

ದೇವನಹಳ್ಳಿ: ಬಿಜೆಪಿ ಸರ್ಕಾರದಿಂದ ಈ ದೇಶದ ಏಳಿಗೆ ಸಾಧ್ಯವಿಲ್ಲ. ಕೇವಲ ಸುಳ್ಳು ಆಶ್ವಾಸನೆ, ಭರವಸೆ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಆರೋಪಿಸಿದರು.

ಬೆಳ್ತಂಗಡಿ, : ಕೂಲಿ ಕೆಲಸ ಮಾಡಿ ವಿದ್ಯಾಭ್ಯಾಸ ಹಾಗೂ ಪಿಎಚ್.ಡಿ ಪಡೆದ ನಿಯಾಝ್ ಪಣಕಜೆ -Vishwanews24

ನಗರದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ, ವಿಜಯಪುರ, ತೂಬಗೆರೆ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದಹಮ್ಮಿಕೊಂಡಿದ್ದ ಮಾ.3ರಂದು ನಡೆಯಲಿರುವ ಜನಧ್ವನಿ ಯಾತ್ರೆಯ ಮಹಿಳಾ ಪದಾಧಿಕಾರಿಗಳಸಭೆಯಲ್ಲಿ ಮಾತನಾಡಿ ಅವರು, ಕೇಂದ್ರ ಸರ್ಕಾರ ಶ್ರೀಮಂತರ ಪರವಾದ ಸರ್ಕಾರವಾಗಿದೆ. ಕೆಪಿಸಿಸಿಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದ ಎಲ್ಲ ನಾಯಕರು ಜನಧ್ವನಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಕೇಂದ್ರ ಮತ್ತುರಾಜ್ಯ ಸರ್ಕಾರದ ವೈಫ‌ಲ್ಯ ಹಾಗೂ ಬೆಲೆಏರಿಕೆ, ರೈತರ ವಿರುದ್ಧ ಕಾಯ್ದೆಗಳನ್ನು ತಂದಿರುವುದು. ಹೀಗೆಹಲವಾರು ಜನಪರ ಸಮಸ್ಯೆ ಮುಂದಿಟ್ಟುಕೊಂಡುಪಾದಯಾತ್ರೆಯ ಮೂಲಕ ಹೋರಾಟ ಮಾಡುತ್ತಿದ್ದೇವೆ ಎಂದರು.

ಮಂಗಳೂರು : ಅಪ್ಪನ ಸಾವಿನಲ್ಲೂ ಎರಡು ಜೀವ ಉಳಿಸಿ ಅಪರೂಪದ ಕರ್ತವ್ಯನಿಷ್ಠೆ ಮೆರೆದ KMC ಯ ಡಾ.ಪದ್ಮನಾಭ ಕಾಮತ್‌ -Vishwanews24

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸಿ ಶ್ರೀನಿವಾಸ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಸನ್ನಕುಮಾರ್‌, ಪ್ರಧಾನ ಕಾರ್ಯದರ್ಶಿ ಎಸ್‌.ಪಿ. ಮುನಿರಾಜು, ಕೆಪಿಸಿಸಿ ಸದಸ್ಯ ಎ.ಚಿನ್ನಪ್ಪ, ವಿಜಯಪುರ ಬ್ಲಾಕ್‌ ಕಾಂಗ್ರೆಸ್‌ಅಧ್ಯಕ್ಷ ರಾಮಚಂದ್ರಪ್ಪ, ಎಪಿಎಂಸಿ ನಿರ್ದೇಶಕ ಸುಧಾಕರ್‌, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರೇವತಿ,ತಾಪಂ ಅಧ್ಯಕ್ಷೆ ಶಶಿಕಲಾ, ಕೆಪಿಸಿಸಿ ಮಹಿಳಾ ಘಟಕದಕಾರ್ಯದರ್ಶಿ ರಾಧಾ, ದೇವನಹಳ್ಳಿ ಮಹಿಳಾಘಟಕದ ಅಧ್ಯಕ್ಷೆ ಮಮತಾ, ವಿಜಯಪುರ ಮಹಿಳಾಘಟಕದ ಅಧ್ಯಕ್ಷೆ ಮಂಜುಳಾ, ತೂಬಗೆರೆ ಮಹಿಳಾಘಟಕದ ಅಧ್ಯಕ್ಷೆ ಅನಂತಕುಮಾರಿ, ಪುರಸಭಾಧ್ಯಕ್ಷೆ ರೇಖಾ, ತಾಪಂ ಸದಸ್ಯರಾದ ಚೈತ್ರಾ, ನಂದಿನಿ, ಉಷಾರಾಣಿ, ಹೇಮಲತಾ, ನಾಗವೇಣಿ, ಪ್ರಭಾವತಿಇದ್ದರು.

ಉಡುಪಿ :ಲವ್‌ ಜಿಹಾದ್ ಪ್ರಕರಣದಲ್ಲಿ ಹೆಚ್ಚು ಬ್ರಾಹ್ಮಣ ಹೆಣ್ಣು ಮಕ್ಕಳೇ ಒಳಗಾಗಿದ್ದಾರೆ ; ಹಿಂದುತ್ವ ಉಳಿಯಬೇಕಾದರೆ ಸಮಸ್ತ ಬ್ರಾಹ್ಮಣರು ಒಗ್ಗಟ್ಟಾಗಬೇಕು : ಸಚ್ಚಿದಾನಂದ ಮೂರ್ತಿ -Vishwanews24