Featured

ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಿಧ ಹೋರಾಟಗಾರರ ಮೇಲೆ ಹಾಕಿರುವ ಎಫ್‌ಐಆರ್‌ಗಳನ್ನು ವಾಪಸ್‌ ಪಡೆಯಲು ನಿರ್ಧಾರ : ಸಿಎಂ ಸಿದ್ದರಾಮಯ್ಯ – Vishwanews24

ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಿಧ ಹೋರಾಟಗಾರರ ಮೇಲೆ ಹಾಕಿರುವ ಎಫ್‌ಐಆರ್‌ಗಳನ್ನು ವಾಪಸ್‌ ಪಡೆಯಲು ನಿರ್ಧಾರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಿಧ ಹೋರಾಟಗಾರರ ಮೇಲೆ ಹಾಕಿರುವ ಎಫ್‌ಐಆರ್‌ಗಳನ್ನು ವಾಪಸ್‌ ಪಡೆಯಲು ನಿರ್ಧರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿ ಸುಮಾರು 40 ಕ್ಕೂ ಹೆಚ್ಚು ಮಂದಿ ಸಾಹಿತಿ ಬರಹಗಾರರು ಹಾಗೂ ನಾನಾ ಜನಪರ ಸಂಘಟನೆಗಳ ಮುಖ್ಯಸ್ಥರ ಜತೆಗೆ ನಡೆದ ಸಭೆಯಲ್ಲಿ ಈ ಭರವಸೆ ನೀಡಿದರು.

ಕನ್ನಡಪರ ಹೋರಾಟಗಾರರು, ರೈತರು, ಕಾರ್ಮಿಕರು, ದಲಿತ ಚಳವಳಿಗಳ ಹೋರಾಟಗಾರರು ಮತ್ತು ಸಾಹಿತಿ, ಬರಹಗಾರರ ಮೇಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಕಿರುವ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು. ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್‌ಗಳು ಮತ್ತು ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಈಗಾಗಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ ಎಂದರು.

ದೇಶವನ್ನು ಅಪಾಯದ ಸುಳಿಗೆ ದೂಡುತ್ತಾ , ಈ‌ ಮಣ್ಣಿನ ಬಹುತ್ವವನ್ನು ನಾಶ ಮಾಡುತ್ತಿರುವ ಬಿಜೆಪಿ ಪರಿವಾರದ ವಿರುದ್ಧ ಖಚಿತ ನಿಲುವು ತೆಗೆದುಕೊಂಡು ಸ್ವಯಂಪ್ರೇರಿತವಾಗಿ ಈ ಚುನಾವಣೆಯಲ್ಲಿ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಕ್ಕಾಗಿ ಸಾಹಿತಿ-ಬರಹಗಾರರಿಗೆ ಅಭಿನಂದನೆ ಸಲ್ಲಿಸಿ ಮೇಲಿನ ಭರವಸೆ ನೀಡಿದರು.

ಮುಖ್ಯಮಂತ್ರಿಗಳ ಭರವಸೆಗಳು.

* ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ.

* ಕನ್ನಡ ಹೋರಾಟಗಾರರು, ರೈತ-ಕಾರ್ಮಿಕ-ದಲಿತ ಚಳವಳಿಗಳ ಹೋರಾಟಗಾರರು ಮತ್ತು ಸಾಹಿತಿ, ಬರಹಗಾರರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು.

* ಹೊಸ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಗಬ್ಬೆಬ್ಬಿಸಲು ಅವಕಾಶ ಕೊಡುವುದಿಲ್ಲ. ಈ ಬಗ್ಗೆ ಮತ್ತೊಮ್ಮೆ ಪ್ರತ್ಯೇಕವಾದ ಸಭೆ ಕರೆದು ಸಮಗ್ರವಾಗಿ ಚರ್ಚಿಸಿ ನಿಷ್ಠುರವಾದ ಮತ್ತು ಖಚಿತವಾದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು.

* ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್ ಗಳು ಮತ್ತು ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಈಗಾಗಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ.

* ಉಳಿದಂತೆ ಸಾಹಿತಿ ಬರಹಗಾರರು ನೀಡಿರುವ ಮನವಿ ಪತ್ರದಲ್ಲಿನ ಸಂಗತಿಗಳನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಅಗತ್ಯಕ್ಕೆ ತಕ್ಕಂತೆ ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago