ಉಡುಪಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಾಗೂ ಸ್ಥಳಿಯ ಬಿಜೆಪಿ ಶಾಸಕರಿದ್ದ ಸಮಯದಲ್ಲಿ ಉಡುಪಿ ಕಿನ್ನಿಮುಲ್ಕಿ ನಗರಸಭಾ ವಾರ್ಡಿನಲ್ಲಿ ಮೀನುಗಾರ ಮಹಿಳೆಯರಿಗಾಗಿ ಸಮಾಜ ಸೇವಕ ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ನಿರ್ಮಿಸಿ ಕೊಟ್ಟಿದ್ದ ಮೀನು ಮಾರುಕಟ್ಟೆಯನ್ನು ಆ ಸಮಯದಲ್ಲಿದ್ದ ನಗರಸಭಾ ಅಧಿಕಾರಿಗಳು ಧ್ವಂಸ ಮಾಡಿ ನೆಲಸಮಗೊಳಿಸಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಏರುತಿದ್ದಂತೆಯೇ ಈ ವಿಚಾರವನ್ನು ಚಾಲೆಂಜ್ ಆಗಿ ಪಡೆದ ಕೃಷ್ಣಮೂರ್ತಿ ಆಚಾರ್ಯ ಅವರು ಅದೇ ಜಾಗದಲ್ಲಿ ಹೊಸ ಮೀನು ಮಾರುಕಟ್ಟೆ ನಿರ್ಮಿಸಿ ಇಂದು ಅದನ್ನು ಮೀನುಗಾರ ಮಹಿಳೆಯಿಂದಲೇ ಉದ್ಘಾಟಿಸುವ ಮುಖೇನ ಅಧಿಕಾರಿಗಳಿಗೆ ಸವಾಲೆಸೆದಿದ್ದಾರೆ.
ಅಂದು ಬಡ ಮೀನುಗಾರ ಮಹಿಳೆಯರಿಗೆ ನಿರ್ಮಾಣ ಮಾಡಿದ್ದ ಮಾರುಕಟ್ಟೆಯನ್ನು ನಗರಸಭಾ ಅಧಿಕಾರಿಗಳು ಜೆಸಿಬಿ ಮುಖೇನ ನೆಲಸಮಗೊಳಿಸಿದ್ದರು.
ಇಂದು ಮತ್ತೆ ಅದೇ ಜಾಗದಲ್ಲಿ ನೂತನವಾಗಿ ಸುಸಜ್ಜಿತವಾದ ಮೀನು ಮಾರುಕಟ್ಟೆ ನಿರ್ಮಾಣಗೊಂಡು ಉದ್ಘಾಟನೆಗೊಂಡಿದೆ.ಈ ಬಗ್ಗೆ ಸ್ಥಳಿಯ ಮೀನುಗಾರ ಮಹಿಳೆಯರು ಫುಲ್ ಖುಷಿಯಾಗಿದ್ದು ಕೃಷ್ಣಮೂರ್ತಿ ಆಚಾರ್ಯ ಹಾಗೂ ದಂಪತಿಗಳನ್ನ ಅಭಿನಂದಿಸಿ ಆಶೀರ್ವಚಿಸದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…