Featured

ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು : ಮಲ್ಲಿಕಾರ್ಜುನ ಖರ್ಗೆ – Vishwanews24

ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು : ಮಲ್ಲಿಕಾರ್ಜುನ ಖರ್ಗೆ – Vishwanews24

ಬೆಂಗಳೂರು: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂವಿಧಾನಕ್ಕೆ ಬೆದರಿಕೆ ಒಡ್ಡುತ್ತಿದ್ದು, ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕೆಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಕರೆ ನೀಡಿದ್ದಾರೆ.

ನಗರದ ಅರಮನೆ ಮೈದಾನದ ನಲಪಾಡ್ ಪೆವಿಲಿಯನ್ ನಲ್ಲಿ ಮಂಗಳವಾರ ಆಯೋಜಿಸಿದ್ದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿರುವ ಅವರು, ಎರಡು ಬಾರಿ ಅಧಿಕಾರಕ್ಕೆ ಬಂದ ಮೋದಿ ದೇಶವನ್ನು ಸರ್ವನಾಶ ಮಾಡಿದ್ದಾರೆ. ಈ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನೇ ಬದಲಿಸಲಿದೆ. ಅವರನ್ನು ಸೋಲಿಸಲು ಮತ್ತು ಸಂವಿಧಾನವನ್ನು ರಕ್ಷಿಸಲು ಅಲ್ಪಸಂಖ್ಯಾತರು ಒಗ್ಗೂಡಬೇಕು. ನಾವು ಕೂಡ ಬಿಜೆಪಿ ವಿರುದ್ಧ ಹೋರಾಡುತ್ತೇವೆ ಮತ್ತು ಅವರನ್ನು ಸೋಲಿಸುತ್ತೇವೆಂದು ಹೇಳಿದ್ದಾರೆ.

ಬಳಿಕ ಕಾಂಗ್ರೆಸ್ ಬೆಂಬಲಕ್ಕೆ ನಿಂತಿರುವ ಸಮುದಾಯವನ್ನು ಶ್ಲಾಘಿಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಅಲ್ಪಸಂಖ್ಯಾತರ ಹೆಸರುಗಳನ್ನು ಬಿಜೆಪಿ ಚುನಾವಣಾ ಪಟ್ಟಿಗಳಿಂದ ತೆಗೆದುಹಾಕುವ ಕೆಲಸ ಮಾಡುತ್ತಿದೆ. ಈ ಬಗ್ಗೆ ಸಮುದಾಯದ ಯುವಕರು ಜಾಗೃತರಾಗಿರಬೇಕು ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ ಸಮಿತಿ ರಚಿಸಲಾಗುತ್ತಿದ್ದು, ಸಮುದಾಯದ ವಿರುದ್ಧದ ಟೀಕೆಗಳಿಗೆ ನೀವು ಚಿಂತಿಸದಿರಿ ನಾವು ನಿಮ್ಮೊಂದಿಗಿದ್ದೇವೆ ಎಂದು ಹೇಳಿದರು.

 

 

 

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

17 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

17 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

17 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

17 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

21 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

21 hours ago