ಬೆಂಗಳೂರು: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂವಿಧಾನಕ್ಕೆ ಬೆದರಿಕೆ ಒಡ್ಡುತ್ತಿದ್ದು, ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಕಾಂಗ್ರೆಸ್ಗೆ ಬೆಂಬಲ ನೀಡಬೇಕೆಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಕರೆ ನೀಡಿದ್ದಾರೆ.
ನಗರದ ಅರಮನೆ ಮೈದಾನದ ನಲಪಾಡ್ ಪೆವಿಲಿಯನ್ ನಲ್ಲಿ ಮಂಗಳವಾರ ಆಯೋಜಿಸಿದ್ದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿರುವ ಅವರು, ಎರಡು ಬಾರಿ ಅಧಿಕಾರಕ್ಕೆ ಬಂದ ಮೋದಿ ದೇಶವನ್ನು ಸರ್ವನಾಶ ಮಾಡಿದ್ದಾರೆ. ಈ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನೇ ಬದಲಿಸಲಿದೆ. ಅವರನ್ನು ಸೋಲಿಸಲು ಮತ್ತು ಸಂವಿಧಾನವನ್ನು ರಕ್ಷಿಸಲು ಅಲ್ಪಸಂಖ್ಯಾತರು ಒಗ್ಗೂಡಬೇಕು. ನಾವು ಕೂಡ ಬಿಜೆಪಿ ವಿರುದ್ಧ ಹೋರಾಡುತ್ತೇವೆ ಮತ್ತು ಅವರನ್ನು ಸೋಲಿಸುತ್ತೇವೆಂದು ಹೇಳಿದ್ದಾರೆ.
ಬಳಿಕ ಕಾಂಗ್ರೆಸ್ ಬೆಂಬಲಕ್ಕೆ ನಿಂತಿರುವ ಸಮುದಾಯವನ್ನು ಶ್ಲಾಘಿಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಅಲ್ಪಸಂಖ್ಯಾತರ ಹೆಸರುಗಳನ್ನು ಬಿಜೆಪಿ ಚುನಾವಣಾ ಪಟ್ಟಿಗಳಿಂದ ತೆಗೆದುಹಾಕುವ ಕೆಲಸ ಮಾಡುತ್ತಿದೆ. ಈ ಬಗ್ಗೆ ಸಮುದಾಯದ ಯುವಕರು ಜಾಗೃತರಾಗಿರಬೇಕು ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಸಮಿತಿ ರಚಿಸಲಾಗುತ್ತಿದ್ದು, ಸಮುದಾಯದ ವಿರುದ್ಧದ ಟೀಕೆಗಳಿಗೆ ನೀವು ಚಿಂತಿಸದಿರಿ ನಾವು ನಿಮ್ಮೊಂದಿಗಿದ್ದೇವೆ ಎಂದು ಹೇಳಿದರು.
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…