ಬೆಂಗಳೂರು: ರಾಜ್ಯವನ್ನು ಮತ್ತೊಂದು ಕಾಶ್ಮೀರ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಮಂಗಳೂರು ಗಲಭೆಯಲ್ಲಿ ಪೊಲೀಸರ ಪಾತ್ರದ ಕುರಿತ ಸಿ.ಡಿ ಬಿಡುಗಡೆ ಮಾಡಿದರು. ಅಲ್ಲದೆ, ಪ್ರತಿಭಟನಾಕಾರರು ಬಂದರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಸಿಸಿ ಟಿವಿ ವಿಡಿಯೊಗಳನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.
ಮಂಗಳೂರಿನಲ್ಲಿ ಸುಪ್ರೀಂ ಕೋರ್ಟ್ನ ನಿವೃತ್ತಿ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ನಡೆಯಬೇಕಿದ್ದ ‘ಪೀಪಲ್ಸ್ ಕೋರ್ಟ್’ ಎಂಬ ಚರ್ಚಾ ಕಾರ್ಯಕ್ರಮ ನಡೆಸಲು ಅವಕಾಶ ನಿರಾಕರಿಸಿದ ಸರ್ಕಾರದ ಕ್ರಮವನ್ನು ಪ್ರಬಲವಾಗಿ ವಿರೋಧಿಸಿದರು.
ಉಡುಪಿ ಜಿಲ್ಲಾಧಿಕಾರಿಯ ಮ್ಯಾಜಿಸ್ಟ್ರೇಟ್ ತನಿಖೆಯಿಂದ ಏನು ವರದಿ ಬರಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.
ಗಲಭೆಕೋರರು ಕೇರಳದಿಂದ ಬಂದವರು ಎಂದು ಗೃಹ ಸಚಿವರು ಹೇಳುತ್ತಾರೆ, ಪೊಲೀಸರು ನಿತ್ಯವೂ ಒಂದೊಂದು ಕತೆ ಕಟ್ಟುತ್ತಿದ್ದಾರೆ. ಡಿಸೆಂಬರ್ 24 ರಂದು ಪ್ರತಿಭಟನಾಕಾರರು ಕಲ್ಲುಗಳನ್ನು ತಂದ ಬಗ್ಗೆ ಕತೆ ಕಟ್ಟಿದರು. ಆದರೆ ನಿಜವಾಗಿ ಅಲ್ಲಿ ಆಗಿರುವುದೇ ಬೇರೆ. ಮೂರು ಬಾರಿ ಕಟ್ಟಡ ತ್ಯಾಜ್ಯ ಸಾಗಿಸಿದ್ದ ಸರಕು ಸಾಗಾಣೆ ಟೆಂಪೊ ಚಾಲಕ, ನಾಲ್ಕನೇ ಬಾರಿ ಬರುವಾಗ ಗಲಭೆ ಉಂಟಾದ ಕಾರಣ ತನ್ನ ಆಟೊವನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋಗಿದ್ದ. ಆದರೆ ಅದನ್ನೇ ಕತೆ ಕಟ್ಟಿ ಕಲ್ಲು ತಂದು ಇಡಲಾಗಿದೆ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…