ಕಲಬುರಗಿ: ಕೇಂದ್ರದ ಕೃಷಿ ಕಾಯಿದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಹಾಗೂ ಕಾಂಗ್ರೆಸ್ ಪಕ್ಷದಿಂದ ನಡೆಸಲಾಗುತ್ತಿರುವ ರಾಜಭವನ ಚಲೋ ಪ್ರತಿಭಟನೆಯನ್ನು ಉಲ್ಲೇಖಿಸಿ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.
ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆ ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರ ತನ್ನ ಅಹಂಕಾರಕ್ಕೆ ಅತೀ ಶೀಘ್ರದಲ್ಲಿಯೇ ತಕ್ಕ ಪ್ರತಿಫಲ ಅನುಭವಿಸಲಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.
ರೈತರ ಈ ಹೋರಾಟ ಕಠಿಣವಾದ ಕೃಷಿ ಕಾಯಿದೆಗಳನ್ನು ವಾಪಸ್ ಪಡೆಯುವವರೆಗೆ ನಿಲ್ಲುವುದಿಲ್ಲ. ರಾಜಭವನ ಚಲೋ ಕಾರ್ಯಕ್ರಮ ರೈತವಿರೋಧಿ ಸರ್ಕಾರ ಕೊನೆಗಾಣಿಸಲು ಮುನ್ನುಡಿಯಾಗಲಿದೆ ಎಂದು ಉಲ್ಲೇಖಿಸಿ ರಾಜಭವನ ಚಲೋ ಪ್ರತಿಭಟನೆಯ ಫೋಟೋಗಳನ್ನು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕೃಷಿ ಕಾನೂನಿನ ಪ್ರಮುಖ ಪಾಲುದಾರರಾದ ರೈತರ ಸೂಕ್ತ ಸಮಾಲೋಚನೆಯಿಲ್ಲದೆ, ಏಕೆ ಅಂಗೀಕರಿಸಲಾಗಿದೆ ಎಂದು ಸರ್ಕಾರ ಉತ್ತರಿಸಬೇಕಾಗಿದೆ. ಈ ಪ್ರತಿಭಟನೆಯಲ್ಲಿ 60ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…