ಕಲಬುರಗಿ: ಕೇಂದ್ರದ ಕೃಷಿ ಕಾಯಿದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಹಾಗೂ ಕಾಂಗ್ರೆಸ್ ಪಕ್ಷದಿಂದ ನಡೆಸಲಾಗುತ್ತಿರುವ ರಾಜಭವನ ಚಲೋ ಪ್ರತಿಭಟನೆಯನ್ನು ಉಲ್ಲೇಖಿಸಿ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.
ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆ ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರ ತನ್ನ ಅಹಂಕಾರಕ್ಕೆ ಅತೀ ಶೀಘ್ರದಲ್ಲಿಯೇ ತಕ್ಕ ಪ್ರತಿಫಲ ಅನುಭವಿಸಲಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.
ರೈತರ ಈ ಹೋರಾಟ ಕಠಿಣವಾದ ಕೃಷಿ ಕಾಯಿದೆಗಳನ್ನು ವಾಪಸ್ ಪಡೆಯುವವರೆಗೆ ನಿಲ್ಲುವುದಿಲ್ಲ. ರಾಜಭವನ ಚಲೋ ಕಾರ್ಯಕ್ರಮ ರೈತವಿರೋಧಿ ಸರ್ಕಾರ ಕೊನೆಗಾಣಿಸಲು ಮುನ್ನುಡಿಯಾಗಲಿದೆ ಎಂದು ಉಲ್ಲೇಖಿಸಿ ರಾಜಭವನ ಚಲೋ ಪ್ರತಿಭಟನೆಯ ಫೋಟೋಗಳನ್ನು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕೃಷಿ ಕಾನೂನಿನ ಪ್ರಮುಖ ಪಾಲುದಾರರಾದ ರೈತರ ಸೂಕ್ತ ಸಮಾಲೋಚನೆಯಿಲ್ಲದೆ, ಏಕೆ ಅಂಗೀಕರಿಸಲಾಗಿದೆ ಎಂದು ಸರ್ಕಾರ ಉತ್ತರಿಸಬೇಕಾಗಿದೆ. ಈ ಪ್ರತಿಭಟನೆಯಲ್ಲಿ 60ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…