ಬಿಜೆಪಿ ಸರ್ಕಾರ ತೊಲಗಿದರೆ ಆಗ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಆಗುತ್ತದೆ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಬಿಜೆಪಿ ಸರ್ಕಾರ ತೊಲಗಿದರೆ ಆಗ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಆಗುತ್ತದೆ : ಸಿದ್ದರಾಮಯ್ಯ -Vishwanews24

ಬೆಂಗಳೂರು: ಬಿಜೆಪಿ ಸರ್ಕಾರ ತೊಲಗಿದರೆ ಉತ್ತಮ, ಆಗ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಆಗುತ್ತದೆ ಎಂದು ವಿವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಲಸಿಗ ಶಾಸಕರ ಸಭೆ ವಿಚಾರವಾಗಿ ಮಾತನಾಡಿದರು. ಅವರು ಸಭೆ ಮಾಡಲಿ, ಬಿಡಲಿ ನಮಗೇನು! ಇವರು ವ್ಯಾಪಾರ ಮಾಡಿಕೊಂಡು ಬಿಜೆಪಿಗೆ ಹೋದವರು. ಅವರ ವ್ಯಾಪಾರ ನನಗೇನು ಗೊತ್ತು, ಇದರ ಬಗ್ಗೆ ನಾನು ಏನೂ ಹೇಳಲ್ಲ ಎಂದರು.

ಸಿಎಂ ರಾಜಕೀಯ ಕಾರ್ಯದರ್ಶಿ ಎನ್ .ಆರ್.ಸಂತೋಷ್ ಆತ್ಮಹತ್ಯೆ ಪ್ರಯತ್ನ ವಿಚಾರವಾಗಿ ಕೇಳಲಾದ ಪ್ರಶ್ನೆಗೆ, ಸಂತೋಷ್ ಯಾರು? ಅವರ ಸಮಸ್ಯೆ ನಮಗೇನು ಗೊತ್ತು? ಅದು ಅವರ ವೈಯುಕ್ತಿಕ ವಿಚಾರ. ರಾಜಕೀಯ ಒತ್ತಡ ಅದೆಲ್ಲ ಇದೆ ಎನ್ನುವುದು ನನಗೇನು ಗೊತ್ತು, ವಿಚಾರಣೆ ನಂತರ ಎಲ್ಲವೂ ಬರುತ್ತದೆ ಎಂದು ಹೇಳಿದರು.

ಲಿಂಗಾಯತ ಒಬಿಸಿಗೆ ಸೇರಿಸುವ ವಿಚಾರದಲ್ಲಿ ಪ್ರತಿಕ್ರಯಿಸಿದ ಸಿದ್ದರಾಮಯ್ಯ, ಒಬಿಸಿ ಪಟ್ಟಿಗೆ ಬರುವವರಿಗೆ ಒಂದು ಆಯೋಗವಿದೆ. ಪಟ್ಟಿಗೆ ಸೇರಿಸುವುದು, ಕೈಬಿಡುವ ನಿರ್ಧಾರ ಅದಕ್ಕೆ ಸೇರಿದೆ. ಆಯೋಗ ಮಾಡಬಹುದೆಂದು ವರದಿ ನೀಡಬೇಕು, ವರದಿ ನಂತರ ಅದರ ಬಗ್ಗೆ ಗಮನಹರಿಸಬಹುದು ಎಂದರು.