ಬೆಂಗಳೂರು: ಬಿಜೆಪಿ ಸರ್ಕಾರ ತೊಲಗಿದರೆ ಉತ್ತಮ, ಆಗ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಆಗುತ್ತದೆ ಎಂದು ವಿವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಲಸಿಗ ಶಾಸಕರ ಸಭೆ ವಿಚಾರವಾಗಿ ಮಾತನಾಡಿದರು. ಅವರು ಸಭೆ ಮಾಡಲಿ, ಬಿಡಲಿ ನಮಗೇನು! ಇವರು ವ್ಯಾಪಾರ ಮಾಡಿಕೊಂಡು ಬಿಜೆಪಿಗೆ ಹೋದವರು. ಅವರ ವ್ಯಾಪಾರ ನನಗೇನು ಗೊತ್ತು, ಇದರ ಬಗ್ಗೆ ನಾನು ಏನೂ ಹೇಳಲ್ಲ ಎಂದರು.
ಸಿಎಂ ರಾಜಕೀಯ ಕಾರ್ಯದರ್ಶಿ ಎನ್ .ಆರ್.ಸಂತೋಷ್ ಆತ್ಮಹತ್ಯೆ ಪ್ರಯತ್ನ ವಿಚಾರವಾಗಿ ಕೇಳಲಾದ ಪ್ರಶ್ನೆಗೆ, ಸಂತೋಷ್ ಯಾರು? ಅವರ ಸಮಸ್ಯೆ ನಮಗೇನು ಗೊತ್ತು? ಅದು ಅವರ ವೈಯುಕ್ತಿಕ ವಿಚಾರ. ರಾಜಕೀಯ ಒತ್ತಡ ಅದೆಲ್ಲ ಇದೆ ಎನ್ನುವುದು ನನಗೇನು ಗೊತ್ತು, ವಿಚಾರಣೆ ನಂತರ ಎಲ್ಲವೂ ಬರುತ್ತದೆ ಎಂದು ಹೇಳಿದರು.
ಲಿಂಗಾಯತ ಒಬಿಸಿಗೆ ಸೇರಿಸುವ ವಿಚಾರದಲ್ಲಿ ಪ್ರತಿಕ್ರಯಿಸಿದ ಸಿದ್ದರಾಮಯ್ಯ, ಒಬಿಸಿ ಪಟ್ಟಿಗೆ ಬರುವವರಿಗೆ ಒಂದು ಆಯೋಗವಿದೆ. ಪಟ್ಟಿಗೆ ಸೇರಿಸುವುದು, ಕೈಬಿಡುವ ನಿರ್ಧಾರ ಅದಕ್ಕೆ ಸೇರಿದೆ. ಆಯೋಗ ಮಾಡಬಹುದೆಂದು ವರದಿ ನೀಡಬೇಕು, ವರದಿ ನಂತರ ಅದರ ಬಗ್ಗೆ ಗಮನಹರಿಸಬಹುದು ಎಂದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…