ಬೆಂಗಳೂರು: ಬಿಜೆಪಿ ಸರ್ಕಾರ ತೊಲಗಿದರೆ ಉತ್ತಮ, ಆಗ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಆಗುತ್ತದೆ ಎಂದು ವಿವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಲಸಿಗ ಶಾಸಕರ ಸಭೆ ವಿಚಾರವಾಗಿ ಮಾತನಾಡಿದರು. ಅವರು ಸಭೆ ಮಾಡಲಿ, ಬಿಡಲಿ ನಮಗೇನು! ಇವರು ವ್ಯಾಪಾರ ಮಾಡಿಕೊಂಡು ಬಿಜೆಪಿಗೆ ಹೋದವರು. ಅವರ ವ್ಯಾಪಾರ ನನಗೇನು ಗೊತ್ತು, ಇದರ ಬಗ್ಗೆ ನಾನು ಏನೂ ಹೇಳಲ್ಲ ಎಂದರು.
ಸಿಎಂ ರಾಜಕೀಯ ಕಾರ್ಯದರ್ಶಿ ಎನ್ .ಆರ್.ಸಂತೋಷ್ ಆತ್ಮಹತ್ಯೆ ಪ್ರಯತ್ನ ವಿಚಾರವಾಗಿ ಕೇಳಲಾದ ಪ್ರಶ್ನೆಗೆ, ಸಂತೋಷ್ ಯಾರು? ಅವರ ಸಮಸ್ಯೆ ನಮಗೇನು ಗೊತ್ತು? ಅದು ಅವರ ವೈಯುಕ್ತಿಕ ವಿಚಾರ. ರಾಜಕೀಯ ಒತ್ತಡ ಅದೆಲ್ಲ ಇದೆ ಎನ್ನುವುದು ನನಗೇನು ಗೊತ್ತು, ವಿಚಾರಣೆ ನಂತರ ಎಲ್ಲವೂ ಬರುತ್ತದೆ ಎಂದು ಹೇಳಿದರು.
ಲಿಂಗಾಯತ ಒಬಿಸಿಗೆ ಸೇರಿಸುವ ವಿಚಾರದಲ್ಲಿ ಪ್ರತಿಕ್ರಯಿಸಿದ ಸಿದ್ದರಾಮಯ್ಯ, ಒಬಿಸಿ ಪಟ್ಟಿಗೆ ಬರುವವರಿಗೆ ಒಂದು ಆಯೋಗವಿದೆ. ಪಟ್ಟಿಗೆ ಸೇರಿಸುವುದು, ಕೈಬಿಡುವ ನಿರ್ಧಾರ ಅದಕ್ಕೆ ಸೇರಿದೆ. ಆಯೋಗ ಮಾಡಬಹುದೆಂದು ವರದಿ ನೀಡಬೇಕು, ವರದಿ ನಂತರ ಅದರ ಬಗ್ಗೆ ಗಮನಹರಿಸಬಹುದು ಎಂದರು.
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…