Featured

ಬಿಜೆಪಿ ಸರ್ಕಾರ ನಾರಾಯಣಗುರುಗೆ ಪದೇ ಪದೇ ಅವಮಾನ ಮಾಡುತ್ತಿದೆ : ಪ್ರಿಯಾಂಕ ಖರ್ಗೆ – Vishwanews24

ಡಬಲ್‌ ಇಂಜಿನ್ ಸರ್ಕಾರದಿಂದ ಡಬಲ್ ದೋಖಾ ಆಗುತ್ತಿದೆ..

ಬಿಜೆಪಿ ಸರ್ಕಾರ ನಾರಾಯಣ ಗುರು ಹೆಸರಲ್ಲಿ ವೋಟ್ ತೆಗೆದುಕೊಂಡು ಪದೇ ಪದೇ ಅವಮಾನ ಮಾಡುತ್ತಿದೆ  ..

ದಕ್ಷಿಣ ಕನ್ನಡ: ಡಬಲ್ ಇಂಜಿನ್ ಸರ್ಕಾರದಿಂದ ಯಾವುದೇ ಪ್ರಯೋಜನ ಆಗಿಲ್ಲ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಕಿಡಿಕಾರಿದ್ದಾರೆ.

ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಬಿಜೆಪಿಯ ಪ್ರಯೋಗ ಶಾಲೆಯಾಗಿದೆ. ಡಬಲ್‌ ಇಂಜಿನ್ ಸರ್ಕಾರದಿಂದ ಡಬಲ್ ದೋಖಾ ಆಗುತ್ತಿದೆ ಎಂದರು.

ಮೋದಿ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುತ್ತಾರೆ ಎಂಬ ಆಸೆ ಜನರಲ್ಲಿತ್ತು. ಆದರೆ ಮೋದಿ ಏನೂ ಘೋಷಣೆ ಮಾಡಿಲ್ಲ, ಇದರಿಂದ ಜನರಿಗೆ ಭಾರೀ ನಿರಾಸೆಯಾಗಿದೆ. ಗುರುನಾರಾಯಣ ಪೀಠ ಮತ್ತು ನಿಗಮ ಸ್ಥಾಪನೆ ಮಾಡುತ್ತಾರೆ ಎಂಬ ನಿರೀಕ್ಷೆಯೂ ಇತ್ತು. ಆದರೆ, ಘೋಷಣೆ ಮಾಡಿಲ್ಲ ಅಂತಾ ನನಗೇನೂ ಆಶ್ಚರ್ಯ ಇಲ್ಲ. ಬಿಜೆಪಿ ಸರ್ಕಾರ ನಾರಾಯಣಗುರುಗೆ ಪದೇ ಪದೇ ಅವಮಾನ ಮಾಡುತ್ತಿದೆ. ಪಠ್ಯ ಪುಸ್ತಕ, ಟ್ಯಾಬ್ಲೋದಲ್ಲೂ ನಾರಾಯಣ ಗುರುವಿಗೆ ಅವಮಾನ ಮಾಡಿದ್ದಾರೆ. ಆದರೆ ಈ ರೀತಿ ಅವಮಾನ ಆದಾಗ ಬಿಜೆಪಿ ಶಾಸಕ, ಸಚಿವರು ಯಾರೂ ಮಾತನಾಡಿಲ್ಲ. ನಾರಾಯಣ ಗುರು ಹೆಸರಲ್ಲಿ ವೋಟ್ ತೆಗೆದುಕೊಳ್ಳುತ್ತಾರೆ. ಅನ್ಯಾಯ ಆದಾಗ ಮಾತ್ರ ಬಾಯಿ ಮುಚ್ಚಿಕೊಳ್ಳುತ್ತಾರೆ‌ ಎಂದರು.

ಕಾರ್ಕಳ : ನೇಣು ಬಿಗಿದು ಯುವತಿ ಆತ್ಮಹತ್ಯೆ – Vishwanews24

ಡಬಲ್‌ ಇಂಜಿನ್ ಸರ್ಕಾರ ಮೂರು ವರ್ಷದಿಂದ ಕತ್ತೆ ಕಾಯುತ್ತಿದ್ಯಾ?. ಎಂಟು ವರ್ಷದಿಂದ ನಾವು ಮಾಡಿದ ಆಸ್ತಿ ಮಾರಾಟ ಮಾಡುತ್ತಿದ್ದೀರಿ. ಅತಿವೃಷ್ಠಿಯಿಂದ ಎಲ್ಲವೂ ನಾಶವಾಗಿದೆ. ಸರ್ಕಾರಕ್ಕೆ ಕಮಿಷನ್ ನಲ್ಲಿ ಮಾತ್ರ ಆಸಕ್ತಿ ಇದೆ ಅಂದ್ರು. ಇನ್ನು ಯೋಗೇಶ್ವರ್, ವಿಶ್ವನಾಥ್, ಯತ್ನಾಳ್, ರೇಣುಕಾಚಾರ್ಯ, ಮಾಧುಸ್ವಾಮಿ ಸೇರಿ ಬಿಜೆಪಿ ವಿರುದ್ಧವೇ ಟೀಕೆ ಮಾಡುತ್ತಿದ್ದಾರೆ. ಕೆಎಸ್ ಈಶ್ವರಪ್ಪ ಗವರ್ನರ್ ಗೇ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಬಿಜೆಪಿvs ಬಿಜೆಪಿ ಜಗಳವಾಗುತ್ತಿದೆ. ಬಿಜೆಪಿ ಗೂಂಡಾಗಳನ್ನು ಬೆಳೆಸುತ್ತಿದೆ. ಕರಾವಳಿ ಭಾಗದಲ್ಲಿ ಕಟೀಲ್ ರನ್ನು ಪವರ್ ಫುಲ್ ಅಂತಾ ಭಾವಿಸಿದ್ದೆ. ಆದರೆ ಇಲ್ಲಿ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮಕ್ಕಿಲ್ಲ. ಮೋದಿ, ನಳಿನ್ ಹೆಸರನ್ನು ವೇದಿಕೆಯಲ್ಲಿ ಹೇಳಿದ್ರಾ ಎಂದು ಪ್ರಶ್ನಿಸಿದರು.

ಉಡುಪಿ : ಉಮೇಶ ಕತ್ತಿ‌ ನಿಧನಕ್ಕೆ ಪೇಜಾವರ ಶ್ರೀ ಸಂತಾಪ – Vishwanews24

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

41 minutes ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

48 minutes ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

60 minutes ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

16 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

16 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

16 hours ago