ದಕ್ಷಿಣ ಕನ್ನಡ: ಡಬಲ್ ಇಂಜಿನ್ ಸರ್ಕಾರದಿಂದ ಯಾವುದೇ ಪ್ರಯೋಜನ ಆಗಿಲ್ಲ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಕಿಡಿಕಾರಿದ್ದಾರೆ.
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಬಿಜೆಪಿಯ ಪ್ರಯೋಗ ಶಾಲೆಯಾಗಿದೆ. ಡಬಲ್ ಇಂಜಿನ್ ಸರ್ಕಾರದಿಂದ ಡಬಲ್ ದೋಖಾ ಆಗುತ್ತಿದೆ ಎಂದರು.
ಮೋದಿ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುತ್ತಾರೆ ಎಂಬ ಆಸೆ ಜನರಲ್ಲಿತ್ತು. ಆದರೆ ಮೋದಿ ಏನೂ ಘೋಷಣೆ ಮಾಡಿಲ್ಲ, ಇದರಿಂದ ಜನರಿಗೆ ಭಾರೀ ನಿರಾಸೆಯಾಗಿದೆ. ಗುರುನಾರಾಯಣ ಪೀಠ ಮತ್ತು ನಿಗಮ ಸ್ಥಾಪನೆ ಮಾಡುತ್ತಾರೆ ಎಂಬ ನಿರೀಕ್ಷೆಯೂ ಇತ್ತು. ಆದರೆ, ಘೋಷಣೆ ಮಾಡಿಲ್ಲ ಅಂತಾ ನನಗೇನೂ ಆಶ್ಚರ್ಯ ಇಲ್ಲ. ಬಿಜೆಪಿ ಸರ್ಕಾರ ನಾರಾಯಣಗುರುಗೆ ಪದೇ ಪದೇ ಅವಮಾನ ಮಾಡುತ್ತಿದೆ. ಪಠ್ಯ ಪುಸ್ತಕ, ಟ್ಯಾಬ್ಲೋದಲ್ಲೂ ನಾರಾಯಣ ಗುರುವಿಗೆ ಅವಮಾನ ಮಾಡಿದ್ದಾರೆ. ಆದರೆ ಈ ರೀತಿ ಅವಮಾನ ಆದಾಗ ಬಿಜೆಪಿ ಶಾಸಕ, ಸಚಿವರು ಯಾರೂ ಮಾತನಾಡಿಲ್ಲ. ನಾರಾಯಣ ಗುರು ಹೆಸರಲ್ಲಿ ವೋಟ್ ತೆಗೆದುಕೊಳ್ಳುತ್ತಾರೆ. ಅನ್ಯಾಯ ಆದಾಗ ಮಾತ್ರ ಬಾಯಿ ಮುಚ್ಚಿಕೊಳ್ಳುತ್ತಾರೆ ಎಂದರು.
ಕಾರ್ಕಳ : ನೇಣು ಬಿಗಿದು ಯುವತಿ ಆತ್ಮಹತ್ಯೆ – Vishwanews24
ಡಬಲ್ ಇಂಜಿನ್ ಸರ್ಕಾರ ಮೂರು ವರ್ಷದಿಂದ ಕತ್ತೆ ಕಾಯುತ್ತಿದ್ಯಾ?. ಎಂಟು ವರ್ಷದಿಂದ ನಾವು ಮಾಡಿದ ಆಸ್ತಿ ಮಾರಾಟ ಮಾಡುತ್ತಿದ್ದೀರಿ. ಅತಿವೃಷ್ಠಿಯಿಂದ ಎಲ್ಲವೂ ನಾಶವಾಗಿದೆ. ಸರ್ಕಾರಕ್ಕೆ ಕಮಿಷನ್ ನಲ್ಲಿ ಮಾತ್ರ ಆಸಕ್ತಿ ಇದೆ ಅಂದ್ರು. ಇನ್ನು ಯೋಗೇಶ್ವರ್, ವಿಶ್ವನಾಥ್, ಯತ್ನಾಳ್, ರೇಣುಕಾಚಾರ್ಯ, ಮಾಧುಸ್ವಾಮಿ ಸೇರಿ ಬಿಜೆಪಿ ವಿರುದ್ಧವೇ ಟೀಕೆ ಮಾಡುತ್ತಿದ್ದಾರೆ. ಕೆಎಸ್ ಈಶ್ವರಪ್ಪ ಗವರ್ನರ್ ಗೇ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಬಿಜೆಪಿvs ಬಿಜೆಪಿ ಜಗಳವಾಗುತ್ತಿದೆ. ಬಿಜೆಪಿ ಗೂಂಡಾಗಳನ್ನು ಬೆಳೆಸುತ್ತಿದೆ. ಕರಾವಳಿ ಭಾಗದಲ್ಲಿ ಕಟೀಲ್ ರನ್ನು ಪವರ್ ಫುಲ್ ಅಂತಾ ಭಾವಿಸಿದ್ದೆ. ಆದರೆ ಇಲ್ಲಿ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮಕ್ಕಿಲ್ಲ. ಮೋದಿ, ನಳಿನ್ ಹೆಸರನ್ನು ವೇದಿಕೆಯಲ್ಲಿ ಹೇಳಿದ್ರಾ ಎಂದು ಪ್ರಶ್ನಿಸಿದರು.
ಉಡುಪಿ : ಉಮೇಶ ಕತ್ತಿ ನಿಧನಕ್ಕೆ ಪೇಜಾವರ ಶ್ರೀ ಸಂತಾಪ – Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…