Featured

ಬಿಜೆಪಿ ಸರ್ಕಾರ ಭಾರತ ಬೆಳಗುತ್ತಿದೆ ಎನ್ನುತ್ತಿದೆ ಆದ್ರೆ ಜನತೆ ಕತ್ತಲೆಯಲ್ಲಿದ್ದಾರೆ : ರಮೇಶ್ ಕಾಂಚನ್ -Vishwanews24

ಬಿಜೆಪಿ ಸರ್ಕಾರ ಭಾರತ ಬೆಳಗುತ್ತಿದೆ ಎನ್ನುತ್ತಿದೆ ಆದ್ರೆ ಜನತೆ ಕತ್ತಲೆಯಲ್ಲಿದ್ದಾರೆ : ರಮೇಶ್ ಕಾಂಚನ್ -Vishwanews24

ಉಡುಪಿ:  ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ದೇಶದಲ್ಲಿ ಅನಿಯಂತ್ರಿತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಡಿಸೇಲ್ ದರವನ್ನು ನಿಯಂತ್ರಿಸಲು ಆಗದೇ ಪರದಾಡುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ, ಹೇಗೆ ಆಡಳಿತ ನಡೆಸುತ್ತಿದೆ ಎನ್ನುವುದಕ್ಕೆ ಇದೊಂದು ಸ್ಪಷ್ಟ ನಿದರ್ಶನವಾಗಿದೆ ಎಂದು ನಗರಸಭಾ ಸದಸ್ಯ, ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಟೀಕಿಸಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಇದ್ಯಾಗ ಪೆಟ್ರೋಲ್, ಡಿಸೇಲ್ ಬೆಲೆ ಈ ರೀತಿ ಏರಿಕೆಯಾಗಿರಲಿಲ್ಲ.ಒಂದೊಮ್ಮೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆಯಾದರೂ ದೇಶದಲ್ಲಿ ಜನರಿಗೆ ಹೊರೆಯಾಗದ ರೀತಿಯಲ್ಲಿ ಸ್ವಲ್ಪ ಬೆಲೆ ಏರಿಕೆ ಮಾಡಲಾಗುತ್ತಿತ್ತು. ಆದ್ರೆ ಇದನ್ನೇ ನೆಪವಾಗಿಟ್ಟುಕೊಂಡು ಬಿಜೆಪಿ ಪಕ್ಷ ಬೀದಿಗಿಳಿದು ಪ್ರತಿಭಟನೆ ನಡೆಸಿತ್ತು.

ಇದೀಗ ದಿನಂಪ್ರತಿ ಬೆಲೆ ಏರಿಕೆಯಾಗುತ್ತಿದ್ದರೂ ಬಿಜೆಪಿ ಪಕ್ಷದ ನಾಯಕರೆಲ್ಲಾ ಕಣ್ಮರೆಯಾಗಿದ್ದಾರೆ. ಇದೀಗ ಯಾವುದೇ ಪ್ರತಿಭಟನೆಯ ಸುದ್ದಿ ಇಲ್ಲ..ಅಂದು ಪೆಟ್ರೋಲ್ , ಡಿಸೇಲ್ ಗಾಗಿ ಪ್ರತಿಭಟಿಸಿ ಪೌರುಷ ತೋರಿಸಿದವರು ಬಾಯಿಮುಚ್ಚಿಕೊಂಡಿದ್ದಾರೆ. ಕೇಂದ್ರದಲ್ಲಿ ಬೆಲೆ ಏರಿಕೆಯಾದರೆ ರಾಜ್ಯದಲ್ಲಿ ಬೆಲೆ ಏರಿಕೆಯ ಜೊತೆಗೆ ತೆರಿಗೆ ಹೆಚ್ಚಳ ಮೂಲಕ ಡಬಲ್ ಶಾಕ್ ಟ್ರಿಟೆಂಟ್ ಸರಕಾರ ನೀಡಿದೆ.ಒಟ್ಟಾರೆಯಾಗಿ ಬಿಜೆಪಿ ಸರ್ಕಾರ ಭಾರತ ಬೆಳಗುತ್ತಿದೆ ಎನ್ನುತ್ತಿದೆ ಆದ್ರೆ ಜನತೆ ಕತ್ತಲೆಯಲ್ಲಿದ್ದಾರೆ ಎಂದು ರಮೇಶ್ ಕಾಂಚನ್ ಟೀಕಿಸಿದ್ದಾರೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

1 hour ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

1 hour ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

1 hour ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

2 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

2 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

3 hours ago