ಬೆಂಗಳೂರು: “ಗಾಂಧೀಜಿಯವರ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ ಗಾಂಧಿ ಪ್ರತಿಮೆ ಮುಂದೆಯೇ ನಿಲ್ಲಬೇಕು. ಇನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಕೊಂಡೇ ಬಿಜೆಪಿ ತಮ್ಮ ಪಕ್ಷವನ್ನು ಕಟ್ಟಿಕೊಳ್ಳುತ್ತಿದೆ. ಆ ಮೂಲಕ ಬಿಜೆಪಿ ಸೇರಿದಂತೆ ಇಡೀ ದೇಶಕ್ಕೆ ಗಾಂಧೀಜಿ ಹಾಗೂ ಕಾಂಗ್ರೆಸ್ ಆಸರೆಯಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.
“ನಾವು ಕೊಟ್ಟಿರುವ ಗ್ಯಾರಂಟಿ ಹಾಗೂ ರಾಷ್ಟ ಮಟ್ಟದ ಯೋಜನೆಗಳನ್ನು ಸಂವಿಧಾನದ ಮೂಲಕ ಜನರಿಗೆ ನೀಡಿದ್ದು, ಇವುಗಳನ್ನು ಬಿಜೆಪಿಯವರಾಗಲಿ, ದಳದವರಾಗಲಿ ಬದಲಾವಣೆ ಮಾಡಲು ಸಾಧ್ಯವಾಗಿಲ್ಲ. ಆಧಾರ್ ಯೋಜನೆಯನ್ನೇ ತೆಗೆದುಕೊಳ್ಳಿ. ಆರಂಭದಲ್ಲಿ ಬಿಜೆಪಿಯವರು ಸಾಕಷ್ಟು ಟೀಕೆ ಟಿಪ್ಪಣಿ ಮಾಡಿದರು. ಆದರೆ ಈಗ ಆಧಾರ್ ಅಲ್ಲದಿದ್ದರೆ ವ್ಯಕ್ತಿಯ ಗುರುತು ಇಲ್ಲದಂತಾಗಿದೆ. ಇದು ಕಾಂಗ್ರೆಸ್ ಪಕ್ಷದ ಯೋಜನೆ. ಆಹಾರ ಭದ್ರತೆ, ಉದ್ಯೋಗ ಖಾತ್ರಿ, ಶೈಕ್ಷಣಿಕ ಹಕ್ಕುಗಳನ್ನು ಕಾಂಗ್ರೆಸ್ ಕೊಟ್ಟಿದೆ” ಎಂದು ತಿಳಿಸಿದರು.
“ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಮತ್ತು ವಿಜಯದಶಮಿ ದಿನ ಆಚರಿಸುತ್ತಿದ್ದೇವೆ. ಕಳೆದ ವರ್ಷದಿಂದ ನಾವು ಗಾಂಧಿ ಭಾರತ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿ ನೂರು ವರ್ಷ ಪೂರ್ಣಗೊಂಡಿದೆ. ಈ ಹೋರಾಟದಿಂದ ಸ್ವಾತಂತ್ರ್ಯ ಪಡೆದು ಆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ತರಲಾಗಿದೆ” ಎಂದು ತಿಳಿಸಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]