ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಗೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೆ ಎಂಬುದು ಇರಲೇಬೇಕಲ್ಲವೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ. ಅಲೆಗ್ಸಾಂಡರ್ ದಿ ಗ್ರೇಟ್ ಇಡೀ ಪ್ರಪಂಚದ ಮುಕ್ಕಾಲು ಪಾಲು ಗೆದ್ದವರೇ ಶಾಶ್ವತವಲ್ಲ. ಸದ್ದಾಂ ಹುಸೇನ್ ಕೊನೆಗಾಲದಲ್ಲಿ ಅವಿತುಕೊಳ್ಳಬೇಕಾಯಿತು. ಇನ್ನು ಬೇರೆಯವರದ್ದು ಯಾವ ಲೆಕ್ಕ ಮನ್ರೇಗಾ ಹೆಸರು ಬದಲಾವಣೆ ವಿರೋಧಿಸಿ 2026ರ ಜನವರಿ 5ನೇ ತಾರೀಖಿನಿಂದ ಹೊಸ ಹೋರಾಟ ರೂಪಿಸಲಾಗುವುದು. ಪಂಚಾಯತಿ ಮಟ್ಟದಿಂದ ಈ ಹೋರಾಟ ಆರಂಭಿಸಲಾಗುವುದು” ಎಂದು ಹೇಳಿದ್ದಾರೆ.
“ಗ್ಯಾರಂಟಿ ಸಮಿತಿ ಸದಸ್ಯರು, ಬೆಸ್ಕಾಂ, ಆರೋಗ್ಯ ಸಮಿತಿ ಸೇರಿದಂತೆ ಇತರೇ ಇಲಾಖೆಗಳಿಂದ ನಾಮನಿರ್ದೇಶನ ಮಾಡಿರುವ ಸದಸ್ಯರ ಸಂಖ್ಯೆಯೇ 150-200 ಇದ್ದು, ಇವರೆಲ್ಲರೂ ಹೋರಾಟದ ಜವಾಬ್ದಾರಿ ತೆಗೆದುಕೊಳ್ಳಬೇಕು” ಎಂದು ತಿಳಿಸಿದರು.
“ಎರಡು – ಮೂರು ತಿಂಗಳಿನಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಬೇಕಿದೆ. ಅದಕ್ಕೂ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ಪ್ರಿಯಾಂಕ್ ಖರ್ಗೆ ಅವರಿಗೂ ಇದರ ಬಗ್ಗೆ ತಿಳಿಸಿದ್ದು, ಮೀಸಲಾತಿ ವಿಚಾರವಾಗಿ ನ್ಯಾಯಾಲಯಗಳಲ್ಲಿ ಇರುವ ಕಂಟಕಗಳನ್ನು ಬಗೆಹರಿಸಿ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ” ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…