Featured

ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ : ಡಿ.ಕೆ.ಶಿ – vishwanews24

ಬಿಜೆಪಿ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೆ ಎಂಬುದು ಇರಲೇಬೇಕಲ್ಲವೇ? : ಡಿ.ಕೆ.ಶಿ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಗೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೆ ಎಂಬುದು ಇರಲೇಬೇಕಲ್ಲವೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ. ಅಲೆಗ್ಸಾಂಡರ್ ದಿ ಗ್ರೇಟ್ ಇಡೀ ಪ್ರಪಂಚದ ಮುಕ್ಕಾಲು ಪಾಲು ಗೆದ್ದವರೇ ಶಾಶ್ವತವಲ್ಲ. ಸದ್ದಾಂ ಹುಸೇನ್ ಕೊನೆಗಾಲದಲ್ಲಿ ಅವಿತುಕೊಳ್ಳಬೇಕಾಯಿತು. ಇನ್ನು ಬೇರೆಯವರದ್ದು ಯಾವ ಲೆಕ್ಕ ಮನ್ರೇಗಾ ಹೆಸರು ಬದಲಾವಣೆ ವಿರೋಧಿಸಿ 2026ರ ಜನವರಿ 5ನೇ ತಾರೀಖಿನಿಂದ ಹೊಸ ಹೋರಾಟ ರೂಪಿಸಲಾಗುವುದು. ಪಂಚಾಯತಿ ಮಟ್ಟದಿಂದ ಈ ಹೋರಾಟ ಆರಂಭಿಸಲಾಗುವುದು” ಎಂದು ಹೇಳಿದ್ದಾರೆ.

“ಗ್ಯಾರಂಟಿ ಸಮಿತಿ ಸದಸ್ಯರು, ಬೆಸ್ಕಾಂ, ಆರೋಗ್ಯ ಸಮಿತಿ ಸೇರಿದಂತೆ ಇತರೇ ಇಲಾಖೆಗಳಿಂದ ನಾಮನಿರ್ದೇಶನ ಮಾಡಿರುವ ಸದಸ್ಯರ ಸಂಖ್ಯೆಯೇ 150-200 ಇದ್ದು, ಇವರೆಲ್ಲರೂ ಹೋರಾಟದ ಜವಾಬ್ದಾರಿ ತೆಗೆದುಕೊಳ್ಳಬೇಕು” ಎಂದು ತಿಳಿಸಿದರು.

“ಎರಡು – ಮೂರು ತಿಂಗಳಿನಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಬೇಕಿದೆ. ಅದಕ್ಕೂ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ. ಪ್ರಿಯಾಂಕ್ ಖರ್ಗೆ ಅವರಿಗೂ ಇದರ ಬಗ್ಗೆ ತಿಳಿಸಿದ್ದು, ಮೀಸಲಾತಿ ವಿಚಾರವಾಗಿ ನ್ಯಾಯಾಲಯಗಳಲ್ಲಿ ಇರುವ ಕಂಟಕಗಳನ್ನು ಬಗೆಹರಿಸಿ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ” ಎಂದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago