Featured

ಬಿಜೆಪಿ ಹಿಂದುತ್ವದ ಪಕ್ಷವಾದರೂ ಇಲ್ಲಿ ಹಿಂದುತ್ವದ ನಾಯಕರನ್ನೇ ಕಡೆಗಣಿಸಲಾಗುತ್ತಿದೆ : ರಘುಪತಿ ಭಟ್ ಆರೋಪ – vishwanews24

ಬಿಜೆಪಿ ಹಿಂದುತ್ವದ ಪಕ್ಷವಾದರೂ ಇಲ್ಲಿ ಹಿಂದುತ್ವದ ನಾಯಕರನ್ನೇ ಕಡೆಗಣಿಸಲಾಗುತ್ತಿದೆ : ರಘುಪತಿ ಭಟ್ ಆರೋಪ

ಪುತ್ತೂರು: ‘ಬಿಜೆಪಿಯಲ್ಲಿ ಟಿಕೆಟ್ ನೀಡುವಾಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಬೆಲೆ ನೀಡಲಾಗುತ್ತಿತ್ತು. ಆದರೆ, ಈಗ ಪಕ್ಷದಲ್ಲಿ ಹಿಂದಿನ ಪದ್ಧತಿ ಉಳಿದಿಲ್ಲ. ಹಿಂದೆ ಪಕ್ಷದಲ್ಲಿ ಅವಕಾಶ ವಂಚಿತರನ್ನು, ಹಿರಿಯರನ್ನು ಗುರುತಿಸಿ ವಿಧಾನಪರಿಷತ್ ಟಿಕೆಟ್‌ ನೀಡಲಾಗುತ್ತಿತ್ತು. ಆದರೆ, ಈಗ ಆ ರೀತಿ ಇಲ್ಲ’ ಎಂದು ವಿಧಾನಪರಿಷತ್ ಚುನಾವಣೆಯ ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಆರೋಪಿಸಿದರು.

ಪುತ್ತೂರಿನ ವಿವಿಧ ಕಡೆ ಪ್ರಚಾರ ಮಾಡಿದ ಅವರು, ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಬೆಂಗಳೂರಿನ ಕ್ಷೇತ್ರವೊಂದಕ್ಕೆ ಹೋಗಿದ್ದೆ. ಅಲ್ಲಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿ ಕಾರ್ಯಕರ್ತರ ಅಭಿಪ್ರಾಯಗಳನ್ನು ಮತಗಳ ರೂಪದಲ್ಲಿ ಪಡೆದು ಪೆಟ್ಟಿಗೆಗೆ ಹಾಕಲಾಗಿತ್ತು. ದುರಂತವೆಂದರೆ ಅಭ್ಯರ್ಥಿ ಆಯ್ಕೆ ಸಂದರ್ಭ ಆ ಪೆಟ್ಟಿಗೆಯನ್ನೇ ತೆರೆಯಲಿಲ್ಲ. ಇದು ಬಿಜೆಪಿಯ ಈಗಿನ ಸ್ಥಿತಿ’ ಎಂದರು.

‘ಬಿಜೆಪಿಯಲ್ಲಿ ಇಂದು ಅಪ್ಪನಿಗೆ ಸಿಎಂ ಪಟ್ಟ, ಮಗನಿಗೆ ರಾಜ್ಯ ಘಟಕದ ಅಧ್ಯಕ್ಷತೆ, ಇನ್ನೊಬ್ಬ ಮಗನಿಗೆ ಸಂಸದ ಸ್ಥಾನ ಬೇಕು. ಆದರೆ, ಸಕ್ರಿಯವಾಗಿ ಕೆಲಸ ಮಾಡುವವರಿಗೆ ಅವಕಾಶವಿಲ್ಲ. ನಾನು ಉಡುಪಿ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕನಾಗಿ, ಒಂದು ಬಾರಿ ನಗರಸಭೆ ಸದಸ್ಯನಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಎಂದೂ ಸೋಲು ಕಾಣದ ನಾನು ಸಕ್ರಿಯ ರಾಜಕಾರಣದಲ್ಲಿ ಇರಬೇಕೆಂದು ಬಯಸಿದವ. ಕರವಳಿ ಭಾಗದ, ಅಡಿಕೆ ಬೆಳೆಗಾರರ ಸಮಸ್ಯೆಗಳ ಅರಿವು ನನಗಿದೆ. ದೇಶದಲ್ಲಿ ಯಾವುದೇ ಶಾಸಕ ಮಾಡದಷ್ಟು ಕೆಲಸವನ್ನು ನಾನು ಮಾಡಿದ್ದೇನೆ. ಕ್ರಿಯಾಶೀಲವಾಗಿ ಕೆಲಸ ಮಾಡುವ ಹುಮ್ಮಸ್ಸು ಇರುವುದರಿಂದಾಗಿಯೇ ವಿಧಾನ ಪರಿಷತ್‌ನಲ್ಲಿ ಸ್ಪರ್ಧಿಸಿದ್ದೇನೆ’ ಎಂದರು.

‘ಬಿಜೆಪಿ ಹಿಂದುತ್ವದ ಪಕ್ಷವಾದರೂ ಇಲ್ಲಿ ಹಿಂದುತ್ವದ ನಾಯಕರನ್ನೇ ಕಡೆಗಣಿಸಲಾಗುತ್ತಿದೆ. ಯಾಕೆ ಹೀಗೆ ಮಾಡುತ್ತಿದ್ದಾರೆ ಎಂಬುದು ನನಗೂ ಗೊತ್ತಿಲ್ಲ. ಆದರೆ, ನನ್ನ ನಿಲುವು ಬಿಜೆಪಿಯದ್ದೆ. ಹಿಂದುತ್ವವೇ ನನ್ನ ನಿಲುವು. ಪಕ್ಷದಲ್ಲಿ ದುಡಿದ ಹಿರಿಯರೊಬ್ಬರಿಗೆ ಟಿಕೆಟ್‌ ಸಿಗುತ್ತಿದ್ದರೆ ಸ್ಪರ್ಧಿಸುತ್ತಿರಲಿಲ್ಲ’ ಎಂದರು.

‘ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಡಾ.ಧನಂಜಯ ಸರ್ಜಿ ಅವರಿಗೆ ಟಿಕೆಟ್ ನೀಡಿದೆ. ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದ ಸಂದರ್ಭ ಅವರು ಸಂಘ ಪರಿವಾರ ಮತ್ತು ಬಿಜೆಪಿಯ ವಿರುದ್ಧವಾಗಿ ಪ್ರಗತಿಪರರೊಂದಿಗೆ ಸೇರಿಕೊಂಡು ಜಾಥಾ ನಡೆಸಿದ್ದರು. ಕಾಂಗ್ರೆಸ್ ಟಿಕೆಟ್‌ಗೆ ಯತ್ನಿಸಿದ ಅವರು ಒಂದು ವರ್ಷದಿಂದೀಚೆಗೆ ಬಿಜೆಪಿ ಜತೆ ಗುರುತಿಸಿಕೊಂಡವರು. ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್ ಕೊಡುತ್ತಿದ್ದರೆ ನನಗೆ ಬೇಸರ ಇರುತ್ತಿರಲಿಲ್ಲ. ಪದವೀಧರ ಕ್ಷೇತ್ರದ ಟಿಕೆಟ್ ಸಹಜವಾಗಿ ಕರಾವಳಿಗೆ ಸಿಗಬೇಕಿತ್ತು. ಅದಕ್ಕಾಗಿ ನನಗೆ ಕೊಡಿ ಎಂದು ಕೇಳಿದ್ದೆ’ ಎಂದರು.

ರಾಜಾರಾಂ ಭಟ್, ನವೀನ್ ಕುಲಾಲ್, ಮಂಗಳೂರು ಮಹಾ ನಗರಪಾಲಿಕೆ ಮಾಜಿ ಸದಸ್ಯ ನವೀನಚಂದ್ರ ಕೆ., ಸಂತೋಷ್ ರಾವ್, ಸುವರ್ಧನ್ ನಾಯಕ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago