Featured

ಬಿಜೆಪಿ ಹಿಂದುತ್ವದ ಪಕ್ಷವಾದರೂ ಇಲ್ಲಿ ಹಿಂದುತ್ವದ ನಾಯಕರನ್ನೇ ಕಡೆಗಣಿಸಲಾಗುತ್ತಿದೆ : ರಘುಪತಿ ಭಟ್ ಆರೋಪ – vishwanews24

ಬಿಜೆಪಿ ಹಿಂದುತ್ವದ ಪಕ್ಷವಾದರೂ ಇಲ್ಲಿ ಹಿಂದುತ್ವದ ನಾಯಕರನ್ನೇ ಕಡೆಗಣಿಸಲಾಗುತ್ತಿದೆ : ರಘುಪತಿ ಭಟ್ ಆರೋಪ

ಪುತ್ತೂರು: ‘ಬಿಜೆಪಿಯಲ್ಲಿ ಟಿಕೆಟ್ ನೀಡುವಾಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಬೆಲೆ ನೀಡಲಾಗುತ್ತಿತ್ತು. ಆದರೆ, ಈಗ ಪಕ್ಷದಲ್ಲಿ ಹಿಂದಿನ ಪದ್ಧತಿ ಉಳಿದಿಲ್ಲ. ಹಿಂದೆ ಪಕ್ಷದಲ್ಲಿ ಅವಕಾಶ ವಂಚಿತರನ್ನು, ಹಿರಿಯರನ್ನು ಗುರುತಿಸಿ ವಿಧಾನಪರಿಷತ್ ಟಿಕೆಟ್‌ ನೀಡಲಾಗುತ್ತಿತ್ತು. ಆದರೆ, ಈಗ ಆ ರೀತಿ ಇಲ್ಲ’ ಎಂದು ವಿಧಾನಪರಿಷತ್ ಚುನಾವಣೆಯ ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಆರೋಪಿಸಿದರು.

ಪುತ್ತೂರಿನ ವಿವಿಧ ಕಡೆ ಪ್ರಚಾರ ಮಾಡಿದ ಅವರು, ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಬೆಂಗಳೂರಿನ ಕ್ಷೇತ್ರವೊಂದಕ್ಕೆ ಹೋಗಿದ್ದೆ. ಅಲ್ಲಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿ ಕಾರ್ಯಕರ್ತರ ಅಭಿಪ್ರಾಯಗಳನ್ನು ಮತಗಳ ರೂಪದಲ್ಲಿ ಪಡೆದು ಪೆಟ್ಟಿಗೆಗೆ ಹಾಕಲಾಗಿತ್ತು. ದುರಂತವೆಂದರೆ ಅಭ್ಯರ್ಥಿ ಆಯ್ಕೆ ಸಂದರ್ಭ ಆ ಪೆಟ್ಟಿಗೆಯನ್ನೇ ತೆರೆಯಲಿಲ್ಲ. ಇದು ಬಿಜೆಪಿಯ ಈಗಿನ ಸ್ಥಿತಿ’ ಎಂದರು.

‘ಬಿಜೆಪಿಯಲ್ಲಿ ಇಂದು ಅಪ್ಪನಿಗೆ ಸಿಎಂ ಪಟ್ಟ, ಮಗನಿಗೆ ರಾಜ್ಯ ಘಟಕದ ಅಧ್ಯಕ್ಷತೆ, ಇನ್ನೊಬ್ಬ ಮಗನಿಗೆ ಸಂಸದ ಸ್ಥಾನ ಬೇಕು. ಆದರೆ, ಸಕ್ರಿಯವಾಗಿ ಕೆಲಸ ಮಾಡುವವರಿಗೆ ಅವಕಾಶವಿಲ್ಲ. ನಾನು ಉಡುಪಿ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕನಾಗಿ, ಒಂದು ಬಾರಿ ನಗರಸಭೆ ಸದಸ್ಯನಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಎಂದೂ ಸೋಲು ಕಾಣದ ನಾನು ಸಕ್ರಿಯ ರಾಜಕಾರಣದಲ್ಲಿ ಇರಬೇಕೆಂದು ಬಯಸಿದವ. ಕರವಳಿ ಭಾಗದ, ಅಡಿಕೆ ಬೆಳೆಗಾರರ ಸಮಸ್ಯೆಗಳ ಅರಿವು ನನಗಿದೆ. ದೇಶದಲ್ಲಿ ಯಾವುದೇ ಶಾಸಕ ಮಾಡದಷ್ಟು ಕೆಲಸವನ್ನು ನಾನು ಮಾಡಿದ್ದೇನೆ. ಕ್ರಿಯಾಶೀಲವಾಗಿ ಕೆಲಸ ಮಾಡುವ ಹುಮ್ಮಸ್ಸು ಇರುವುದರಿಂದಾಗಿಯೇ ವಿಧಾನ ಪರಿಷತ್‌ನಲ್ಲಿ ಸ್ಪರ್ಧಿಸಿದ್ದೇನೆ’ ಎಂದರು.

‘ಬಿಜೆಪಿ ಹಿಂದುತ್ವದ ಪಕ್ಷವಾದರೂ ಇಲ್ಲಿ ಹಿಂದುತ್ವದ ನಾಯಕರನ್ನೇ ಕಡೆಗಣಿಸಲಾಗುತ್ತಿದೆ. ಯಾಕೆ ಹೀಗೆ ಮಾಡುತ್ತಿದ್ದಾರೆ ಎಂಬುದು ನನಗೂ ಗೊತ್ತಿಲ್ಲ. ಆದರೆ, ನನ್ನ ನಿಲುವು ಬಿಜೆಪಿಯದ್ದೆ. ಹಿಂದುತ್ವವೇ ನನ್ನ ನಿಲುವು. ಪಕ್ಷದಲ್ಲಿ ದುಡಿದ ಹಿರಿಯರೊಬ್ಬರಿಗೆ ಟಿಕೆಟ್‌ ಸಿಗುತ್ತಿದ್ದರೆ ಸ್ಪರ್ಧಿಸುತ್ತಿರಲಿಲ್ಲ’ ಎಂದರು.

‘ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಡಾ.ಧನಂಜಯ ಸರ್ಜಿ ಅವರಿಗೆ ಟಿಕೆಟ್ ನೀಡಿದೆ. ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದ ಸಂದರ್ಭ ಅವರು ಸಂಘ ಪರಿವಾರ ಮತ್ತು ಬಿಜೆಪಿಯ ವಿರುದ್ಧವಾಗಿ ಪ್ರಗತಿಪರರೊಂದಿಗೆ ಸೇರಿಕೊಂಡು ಜಾಥಾ ನಡೆಸಿದ್ದರು. ಕಾಂಗ್ರೆಸ್ ಟಿಕೆಟ್‌ಗೆ ಯತ್ನಿಸಿದ ಅವರು ಒಂದು ವರ್ಷದಿಂದೀಚೆಗೆ ಬಿಜೆಪಿ ಜತೆ ಗುರುತಿಸಿಕೊಂಡವರು. ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್ ಕೊಡುತ್ತಿದ್ದರೆ ನನಗೆ ಬೇಸರ ಇರುತ್ತಿರಲಿಲ್ಲ. ಪದವೀಧರ ಕ್ಷೇತ್ರದ ಟಿಕೆಟ್ ಸಹಜವಾಗಿ ಕರಾವಳಿಗೆ ಸಿಗಬೇಕಿತ್ತು. ಅದಕ್ಕಾಗಿ ನನಗೆ ಕೊಡಿ ಎಂದು ಕೇಳಿದ್ದೆ’ ಎಂದರು.

ರಾಜಾರಾಂ ಭಟ್, ನವೀನ್ ಕುಲಾಲ್, ಮಂಗಳೂರು ಮಹಾ ನಗರಪಾಲಿಕೆ ಮಾಜಿ ಸದಸ್ಯ ನವೀನಚಂದ್ರ ಕೆ., ಸಂತೋಷ್ ರಾವ್, ಸುವರ್ಧನ್ ನಾಯಕ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

16 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

16 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

17 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

17 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

17 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

17 hours ago