Featured

ಬಿಜೆಪಿ ಹಿಂದುತ್ವದ ಪಕ್ಷವಾದರೂ ಇಲ್ಲಿ ಹಿಂದುತ್ವದ ನಾಯಕರನ್ನೇ ಕಡೆಗಣಿಸಲಾಗುತ್ತಿದೆ : ರಘುಪತಿ ಭಟ್ ಆರೋಪ – vishwanews24

ಬಿಜೆಪಿ ಹಿಂದುತ್ವದ ಪಕ್ಷವಾದರೂ ಇಲ್ಲಿ ಹಿಂದುತ್ವದ ನಾಯಕರನ್ನೇ ಕಡೆಗಣಿಸಲಾಗುತ್ತಿದೆ : ರಘುಪತಿ ಭಟ್ ಆರೋಪ

ಪುತ್ತೂರು: ‘ಬಿಜೆಪಿಯಲ್ಲಿ ಟಿಕೆಟ್ ನೀಡುವಾಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಬೆಲೆ ನೀಡಲಾಗುತ್ತಿತ್ತು. ಆದರೆ, ಈಗ ಪಕ್ಷದಲ್ಲಿ ಹಿಂದಿನ ಪದ್ಧತಿ ಉಳಿದಿಲ್ಲ. ಹಿಂದೆ ಪಕ್ಷದಲ್ಲಿ ಅವಕಾಶ ವಂಚಿತರನ್ನು, ಹಿರಿಯರನ್ನು ಗುರುತಿಸಿ ವಿಧಾನಪರಿಷತ್ ಟಿಕೆಟ್‌ ನೀಡಲಾಗುತ್ತಿತ್ತು. ಆದರೆ, ಈಗ ಆ ರೀತಿ ಇಲ್ಲ’ ಎಂದು ವಿಧಾನಪರಿಷತ್ ಚುನಾವಣೆಯ ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಆರೋಪಿಸಿದರು.

ಪುತ್ತೂರಿನ ವಿವಿಧ ಕಡೆ ಪ್ರಚಾರ ಮಾಡಿದ ಅವರು, ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಬೆಂಗಳೂರಿನ ಕ್ಷೇತ್ರವೊಂದಕ್ಕೆ ಹೋಗಿದ್ದೆ. ಅಲ್ಲಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿ ಕಾರ್ಯಕರ್ತರ ಅಭಿಪ್ರಾಯಗಳನ್ನು ಮತಗಳ ರೂಪದಲ್ಲಿ ಪಡೆದು ಪೆಟ್ಟಿಗೆಗೆ ಹಾಕಲಾಗಿತ್ತು. ದುರಂತವೆಂದರೆ ಅಭ್ಯರ್ಥಿ ಆಯ್ಕೆ ಸಂದರ್ಭ ಆ ಪೆಟ್ಟಿಗೆಯನ್ನೇ ತೆರೆಯಲಿಲ್ಲ. ಇದು ಬಿಜೆಪಿಯ ಈಗಿನ ಸ್ಥಿತಿ’ ಎಂದರು.

‘ಬಿಜೆಪಿಯಲ್ಲಿ ಇಂದು ಅಪ್ಪನಿಗೆ ಸಿಎಂ ಪಟ್ಟ, ಮಗನಿಗೆ ರಾಜ್ಯ ಘಟಕದ ಅಧ್ಯಕ್ಷತೆ, ಇನ್ನೊಬ್ಬ ಮಗನಿಗೆ ಸಂಸದ ಸ್ಥಾನ ಬೇಕು. ಆದರೆ, ಸಕ್ರಿಯವಾಗಿ ಕೆಲಸ ಮಾಡುವವರಿಗೆ ಅವಕಾಶವಿಲ್ಲ. ನಾನು ಉಡುಪಿ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕನಾಗಿ, ಒಂದು ಬಾರಿ ನಗರಸಭೆ ಸದಸ್ಯನಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಎಂದೂ ಸೋಲು ಕಾಣದ ನಾನು ಸಕ್ರಿಯ ರಾಜಕಾರಣದಲ್ಲಿ ಇರಬೇಕೆಂದು ಬಯಸಿದವ. ಕರವಳಿ ಭಾಗದ, ಅಡಿಕೆ ಬೆಳೆಗಾರರ ಸಮಸ್ಯೆಗಳ ಅರಿವು ನನಗಿದೆ. ದೇಶದಲ್ಲಿ ಯಾವುದೇ ಶಾಸಕ ಮಾಡದಷ್ಟು ಕೆಲಸವನ್ನು ನಾನು ಮಾಡಿದ್ದೇನೆ. ಕ್ರಿಯಾಶೀಲವಾಗಿ ಕೆಲಸ ಮಾಡುವ ಹುಮ್ಮಸ್ಸು ಇರುವುದರಿಂದಾಗಿಯೇ ವಿಧಾನ ಪರಿಷತ್‌ನಲ್ಲಿ ಸ್ಪರ್ಧಿಸಿದ್ದೇನೆ’ ಎಂದರು.

‘ಬಿಜೆಪಿ ಹಿಂದುತ್ವದ ಪಕ್ಷವಾದರೂ ಇಲ್ಲಿ ಹಿಂದುತ್ವದ ನಾಯಕರನ್ನೇ ಕಡೆಗಣಿಸಲಾಗುತ್ತಿದೆ. ಯಾಕೆ ಹೀಗೆ ಮಾಡುತ್ತಿದ್ದಾರೆ ಎಂಬುದು ನನಗೂ ಗೊತ್ತಿಲ್ಲ. ಆದರೆ, ನನ್ನ ನಿಲುವು ಬಿಜೆಪಿಯದ್ದೆ. ಹಿಂದುತ್ವವೇ ನನ್ನ ನಿಲುವು. ಪಕ್ಷದಲ್ಲಿ ದುಡಿದ ಹಿರಿಯರೊಬ್ಬರಿಗೆ ಟಿಕೆಟ್‌ ಸಿಗುತ್ತಿದ್ದರೆ ಸ್ಪರ್ಧಿಸುತ್ತಿರಲಿಲ್ಲ’ ಎಂದರು.

‘ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಡಾ.ಧನಂಜಯ ಸರ್ಜಿ ಅವರಿಗೆ ಟಿಕೆಟ್ ನೀಡಿದೆ. ಶಿವಮೊಗ್ಗದಲ್ಲಿ ಹರ್ಷ ಕೊಲೆಯಾದ ಸಂದರ್ಭ ಅವರು ಸಂಘ ಪರಿವಾರ ಮತ್ತು ಬಿಜೆಪಿಯ ವಿರುದ್ಧವಾಗಿ ಪ್ರಗತಿಪರರೊಂದಿಗೆ ಸೇರಿಕೊಂಡು ಜಾಥಾ ನಡೆಸಿದ್ದರು. ಕಾಂಗ್ರೆಸ್ ಟಿಕೆಟ್‌ಗೆ ಯತ್ನಿಸಿದ ಅವರು ಒಂದು ವರ್ಷದಿಂದೀಚೆಗೆ ಬಿಜೆಪಿ ಜತೆ ಗುರುತಿಸಿಕೊಂಡವರು. ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್ ಕೊಡುತ್ತಿದ್ದರೆ ನನಗೆ ಬೇಸರ ಇರುತ್ತಿರಲಿಲ್ಲ. ಪದವೀಧರ ಕ್ಷೇತ್ರದ ಟಿಕೆಟ್ ಸಹಜವಾಗಿ ಕರಾವಳಿಗೆ ಸಿಗಬೇಕಿತ್ತು. ಅದಕ್ಕಾಗಿ ನನಗೆ ಕೊಡಿ ಎಂದು ಕೇಳಿದ್ದೆ’ ಎಂದರು.

ರಾಜಾರಾಂ ಭಟ್, ನವೀನ್ ಕುಲಾಲ್, ಮಂಗಳೂರು ಮಹಾ ನಗರಪಾಲಿಕೆ ಮಾಜಿ ಸದಸ್ಯ ನವೀನಚಂದ್ರ ಕೆ., ಸಂತೋಷ್ ರಾವ್, ಸುವರ್ಧನ್ ನಾಯಕ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

15 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

15 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

15 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

15 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

16 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

16 hours ago