ಬಿಡಿಎ ಕಚೇರಿಯ 25 ಭ್ರಷ್ಟ ಅಧಿಕಾರಿಗಳ‌ ಮೇಲೆ ಎಫ್​ಐಆರ್ ದಾಖಲಿಸಲು ರಾಜ್ಯ ಸರ್ಕಾರದ ಅನುಮತಿ – Vishwanews24

Featured, ರಾಜ್ಯ ನ್ಯೂಸ್

ಬಿಡಿಎ ಕಚೇರಿಯ 25 ಭ್ರಷ್ಟ ಅಧಿಕಾರಿಗಳ‌ ಮೇಲೆ ಎಫ್​ಐಆರ್ ದಾಖಲಿಸಲು ರಾಜ್ಯ ಸರ್ಕಾರದ ಅನುಮತಿ – Vishwanews24

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮೇಲೆ ಇತ್ತೀಚೆಗೆ ನಡೆದಿದ್ದ ಎಸಿಬಿ ದಾಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಭ್ರಷ್ಟ ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲಿಸಲು ಕೊನೆಗೂ ಅನುಮತಿ ನೀಡಿದೆ.

ನಕಲಿ ದಾಖಲೆ ಸೃಷ್ಟಿಸಿ ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಜಮೀನನ್ನು ಕಬಳಿಸಿದ್ದ ಆರೋಪದ ಮೇಲೆ 40 ಎಫ್‌ಐಆರ್‌ಗಳನ್ನು ದಾಖಲಿಸಲು ಎಸಿಬಿ ಸರ್ಕಾರದ ಬಳಿ ಅನುಮತಿ ಕೋರಿತ್ತು.

ಈ ಸಂಬಂಧ 25 ಅಧಿಕಾರಿಗಳ ಮೇಲೆ ಎಫ್‌ಐಆರ್ ದಾಖಲಿಸಲು ನಗರಾಭಿವೃದ್ದಿ ಇಲಾಖೆಯಿಂದ ಅನುಮತಿ ನೀಡಲಾಗಿದೆ. ಇದರಿಂದ ಭ್ರಷ್ಟ ಅಧಿಕಾರಿಗಳಿಗೆ ಬಂಧನದ ಭೀತಿ ಎದುರಾಗಿದೆ.

ಕೆಲ ದಿನಗಳ ಹಿಂದೆ ಬಿಡಿಎ ಕಚೇರಿ ಮೇಲೆ ದಾಳಿ ಮಾಡಿದ್ದ ಎಸಿಬಿ ಅಧಿಕಾರಿಗಳೂ ನಿರಂತರ ಮೂರು ದಿನ ಕಡತಗಳ ಪರಿಶೀಲನೆ ಮಾಡಿದ್ದರು. ದಾಳಿ ವೇಳೆ ಸುಮಾರು 200 ಕೋಟಿಗೂ ಅಧಿಕ ಅವ್ಯವಹಾರ ಪತ್ತೆಯಾಗಿತ್ತು.

ಇದನ್ನೂ ಓದಿ :

ಉಡುಪಿ ಹಿಜಾಬ್‌ ವಿವಾದ  :  ಬೇರೆ ವಿದ್ಯಾರ್ಥಿಗಳ ಜೊತೆ ನಮಗೆ ತಾರತಮ್ಯ ಮಾಡಬೇಡಿ ; ಆನ್‌ಲೈನ್‌ ಕ್ಲಾಸಿಗೆ ವಿದ್ಯಾರ್ಥಿನಿಯರ ವಿರೋಧ – Vishwanews24 

ನಕಲಿ ದಾಖಲಾತಿ ಸೃಷ್ಟಿಸಿ ಅರ್ಹರಲ್ಲದವರಿಗೆ ಸೈಟ್ ಮಂಜೂರು, ಒಂದೇ ಸೈಟ್ ಇಬ್ಬರಿಗೂ ಮಂಜೂರು ಮಾಡಿರುವುದು ಸೇರಿದಂತೆ ಹಲವು ಆಕ್ರಮಗಳು ದಾಳಿ ವೇಳೆ ಪತ್ತೆಯಾಗಿದ್ದವು. ಎಸಿಬಿ ಅಧಿಕಾರಿಗಳು ರೂ.100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಭಾರೀ ಭ್ರಷ್ಟಾಚಾರಕ್ಕಾಗಿ ಅಕ್ರಮವಾಗಿ ಭೂ ದಾಖಲೆಗಳನ್ನು ತಿರುಚಿ, ನಕಲಿ ದಾಖಲಾತಿಗಳ ಸೃಷ್ಟಿಸಿರುವುದರಲ್ಲಿ ಬಿಡಿಎ ಅಧಿಕಾರಿಗಳು ಹಾಗೂ ಸಿಬ್ಬಂದಿ ತೊಡಗಿಸಿಕೊಂಡಿರುವುದನ್ನು ಎಸಿಬಿ ಅಧಿಕಾರಿಗಳು ಪತ್ತೆ ಹಚ್ಚಿದರು.

ಅಲ್ಲದೇ, ಒಂದೇ ನಿವೇಶನವನ್ನು ಅನೇಕ ಜನರಿಗೆ ಹಂಚಿಕೆ ಮಾಡಿ, ತದನಂತರ ಅವರನ್ನು ಕೋರ್ಟ್‌ಗೆ ಹೋಗುವಂತೆ ಹೇಳಲಾಗಿದೆ. ಉಪ ಕಾರ್ಯದರ್ಶಿಗಳ ಕಚೇರಿ, ವಿಶೇಷ ಭೂಸ್ವಾಧೀನ ಮತ್ತಿತರರ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಒಂದೇ ಆಸ್ತಿಯಲ್ಲಿ ವಿವಿಧ ವ್ಯಕ್ತಿಗಳಿಗೆ ದಾಖಲೆ ನೀಡಿರುವುದು ಪತ್ತೆಯಾಗಿದೆ. ಕೆ.ಆರ್. ಪುರಂನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ 35 ನಿವೇಶನ ಹಂಚಿಕೆ ಮಾಡಿರುವುದು ಪತ್ತೆಯಾಗಿದ್ದವು. ಅಕಾರ್ವತಿ ಲೇಔಟ್, ಕೆಂಪೇಗೌಡ ಲೇಔಟ್, ಚಂದ್ರ ಲೇಔಟ್ ಮತ್ತಿತರ ಕಡೆಗಳಲ್ಲಿ ಅಕ್ರಮವಾಗಿ ಬಿಡಿಎ ನಿವೇಶನ ಹಂಚಿಕೆ ಮಾಡಿರುವುದನ್ನು ಕೂಡಾ ಅಧಿಕಾರಿಗಳು ಪತ್ತೆ ಮಾಡಲಾಗಿತ್ತು.

ಇದನ್ನೂ ಓದಿ :

ಪ್ರಧಾನಿ ಮೋದಿ ಸರ್ಕಾರದ ಒತ್ತಡದಿಂದ ತಮ್ಮ ಟ್ವಿಟರ್​ ಫಾಲೋವರ್​ಗಳ ಸಂಖ್ಯೆ ಸೀಮಿತಗೊಳಿಸುತ್ತಿದೆ : ರಾಹುಲ್ ಗಾಂಧಿ ಆರೋಪ – Vishwanews24

Leave a Reply