ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮೇಲೆ ಇತ್ತೀಚೆಗೆ ನಡೆದಿದ್ದ ಎಸಿಬಿ ದಾಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಭ್ರಷ್ಟ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲಿಸಲು ಕೊನೆಗೂ ಅನುಮತಿ ನೀಡಿದೆ.
ನಕಲಿ ದಾಖಲೆ ಸೃಷ್ಟಿಸಿ ಕೊಟ್ಯಂತರ ರೂಪಾಯಿ ಬೆಲೆ ಬಾಳುವ ಜಮೀನನ್ನು ಕಬಳಿಸಿದ್ದ ಆರೋಪದ ಮೇಲೆ 40 ಎಫ್ಐಆರ್ಗಳನ್ನು ದಾಖಲಿಸಲು ಎಸಿಬಿ ಸರ್ಕಾರದ ಬಳಿ ಅನುಮತಿ ಕೋರಿತ್ತು.
ಈ ಸಂಬಂಧ 25 ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲಿಸಲು ನಗರಾಭಿವೃದ್ದಿ ಇಲಾಖೆಯಿಂದ ಅನುಮತಿ ನೀಡಲಾಗಿದೆ. ಇದರಿಂದ ಭ್ರಷ್ಟ ಅಧಿಕಾರಿಗಳಿಗೆ ಬಂಧನದ ಭೀತಿ ಎದುರಾಗಿದೆ.
ಕೆಲ ದಿನಗಳ ಹಿಂದೆ ಬಿಡಿಎ ಕಚೇರಿ ಮೇಲೆ ದಾಳಿ ಮಾಡಿದ್ದ ಎಸಿಬಿ ಅಧಿಕಾರಿಗಳೂ ನಿರಂತರ ಮೂರು ದಿನ ಕಡತಗಳ ಪರಿಶೀಲನೆ ಮಾಡಿದ್ದರು. ದಾಳಿ ವೇಳೆ ಸುಮಾರು 200 ಕೋಟಿಗೂ ಅಧಿಕ ಅವ್ಯವಹಾರ ಪತ್ತೆಯಾಗಿತ್ತು.
ಇದನ್ನೂ ಓದಿ :
ನಕಲಿ ದಾಖಲಾತಿ ಸೃಷ್ಟಿಸಿ ಅರ್ಹರಲ್ಲದವರಿಗೆ ಸೈಟ್ ಮಂಜೂರು, ಒಂದೇ ಸೈಟ್ ಇಬ್ಬರಿಗೂ ಮಂಜೂರು ಮಾಡಿರುವುದು ಸೇರಿದಂತೆ ಹಲವು ಆಕ್ರಮಗಳು ದಾಳಿ ವೇಳೆ ಪತ್ತೆಯಾಗಿದ್ದವು. ಎಸಿಬಿ ಅಧಿಕಾರಿಗಳು ರೂ.100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಭಾರೀ ಭ್ರಷ್ಟಾಚಾರಕ್ಕಾಗಿ ಅಕ್ರಮವಾಗಿ ಭೂ ದಾಖಲೆಗಳನ್ನು ತಿರುಚಿ, ನಕಲಿ ದಾಖಲಾತಿಗಳ ಸೃಷ್ಟಿಸಿರುವುದರಲ್ಲಿ ಬಿಡಿಎ ಅಧಿಕಾರಿಗಳು ಹಾಗೂ ಸಿಬ್ಬಂದಿ ತೊಡಗಿಸಿಕೊಂಡಿರುವುದನ್ನು ಎಸಿಬಿ ಅಧಿಕಾರಿಗಳು ಪತ್ತೆ ಹಚ್ಚಿದರು.
ಅಲ್ಲದೇ, ಒಂದೇ ನಿವೇಶನವನ್ನು ಅನೇಕ ಜನರಿಗೆ ಹಂಚಿಕೆ ಮಾಡಿ, ತದನಂತರ ಅವರನ್ನು ಕೋರ್ಟ್ಗೆ ಹೋಗುವಂತೆ ಹೇಳಲಾಗಿದೆ. ಉಪ ಕಾರ್ಯದರ್ಶಿಗಳ ಕಚೇರಿ, ವಿಶೇಷ ಭೂಸ್ವಾಧೀನ ಮತ್ತಿತರರ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಒಂದೇ ಆಸ್ತಿಯಲ್ಲಿ ವಿವಿಧ ವ್ಯಕ್ತಿಗಳಿಗೆ ದಾಖಲೆ ನೀಡಿರುವುದು ಪತ್ತೆಯಾಗಿದೆ. ಕೆ.ಆರ್. ಪುರಂನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ 35 ನಿವೇಶನ ಹಂಚಿಕೆ ಮಾಡಿರುವುದು ಪತ್ತೆಯಾಗಿದ್ದವು. ಅಕಾರ್ವತಿ ಲೇಔಟ್, ಕೆಂಪೇಗೌಡ ಲೇಔಟ್, ಚಂದ್ರ ಲೇಔಟ್ ಮತ್ತಿತರ ಕಡೆಗಳಲ್ಲಿ ಅಕ್ರಮವಾಗಿ ಬಿಡಿಎ ನಿವೇಶನ ಹಂಚಿಕೆ ಮಾಡಿರುವುದನ್ನು ಕೂಡಾ ಅಧಿಕಾರಿಗಳು ಪತ್ತೆ ಮಾಡಲಾಗಿತ್ತು.
ಇದನ್ನೂ ಓದಿ :
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…