ಮoಗಳೂರು, : ‘ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮೂರು ತಿಂಗಳು ಮೆಸ್ಕಾಂ ಬಿಲ್ ಮನ್ನಾ ಮಾಡಲಾಗುತ್ತದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಮೆಸ್ಕಾಂ ಸ್ಪಷ್ಟಪಡಿಸಿದೆ.
‘ಬಿಪಿಎಲ್ ಕಾರ್ಡ್ ಇದ್ದವರಿಗೆ ಸರಕಾರದಿಂದ ಮೆಸ್ಕಾಂ ಕಂಪನಿ ಮೂರು ತಿಂಗಳ ಕರೆಂಟ್ ಬಿಲ್ ಮನ್ನಾ ಮಾಡಿದೆ. ಆಧಾರ್ ಕಾರ್ಡ್ ಮತ್ತು ಕರೆಂಟ್ ಬಿಲ್ಲಿನ ಪ್ರತಿ ಮತ್ತು ಬಿಪಿಎಲ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಹತ್ತಿರದ ಮೆಸ್ಕಾಂ ಇಲಾಖೆಗೆ ಸಲ್ಲಿಸಬೇಕು’ ಎಂದು ಪ್ರಕಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಬಗ್ಗೆ ಮೆಸ್ಕಾಂ ಸಾರ್ವಜನಿಕ ಸಂಪರ್ಕ ಅಧಿಕಾರಿ ವಸಂತ್ ಶೆಟ್ಟಿ ಅವರನ್ನು ಸಂಪರ್ಕಿಸಿದಾಗ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದ್ದಾರೆ.
‘ಮೆಸ್ಕಾಂ ಕಚೇರಿಯಿಂದ ಈ ರೀತಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಯಾವುದೇ ಬಿಲ್ ಮನ್ನಾ ಮಾಡಿ ಆದೇಶ ಹೊರಡಿಸಿಲ್ಲ’ ಎಂದು ಅವರು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…