Featured

ಬಿಪಿನ್‌ ರಾವತ್‌‌ ಅವರು ದೇಶದ ಬಗ್ಗೆ ಕಂಡಿದ್ದ ಕನಸುಗಳನ್ನು ನನಸು ಮಾಡುವ ಕರ್ತವ್ಯ ಇಂದಿನ ಯುವಜನಾಂಗದ ಮೇಲಿದೆ :ಸಿಎಂ ಬೊಮ್ಮಾಯಿ – Vishwanews24

ಬಿಪಿನ್‌ ರಾವತ್‌‌ ಅವರು ದೇಶದ ಬಗ್ಗೆ ಕಂಡಿದ್ದ ಕನಸುಗಳನ್ನು ನನಸು ಮಾಡುವ ಕರ್ತವ್ಯ ಇಂದಿನ ಯುವಜನಾಂಗದ ಮೇಲಿದೆ :ಸಿಎಂ ಬೊಮ್ಮಾಯಿ

ಅವರ ಕನಸುಗಳನ್ನು ನನಸು ಮಾಡುವುದೇ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ..

ಬೆಂಗಳೂರು: “ಹೆಲಿಕಾಪ್ಟರ್‌‌ ದುರಂತದಲ್ಲಿ ಮೃತಪಟ್ಟ ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್‌‌ ಬಿಪಿನ್‌ ರಾವತ್‌‌ ಅವರ ಕನಸುಗಳನ್ನು ನನಸು ಮಾಡುವುದೇ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ” ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ಧಾರೆ.

ವಿಧಾನಸೌದದ ಬಾಂಕ್ವೆಟ್‌‌ ಹಾಲ್‌ನಲ್ಲಿ ಡಿಆರ್‌‌ಡಿಒ ಹಾಗೂ ಡಿಎಫ್‌‌‌ಆರ್‌ಎಲ್‌‌ ವತಿಯಿಂದ ಆಯೋಜಿಸಿದ್ದ ಸಶಸ್ತ್ರ ಪಡೆಗಳಿಗೆ ಆಹಾರ ಹಾಗೂ ಲಾಜಿಸ್ಟಕ್‌‌‌ ನೆರವು ಕುರಿತ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, “ಈ ಘಟನೆಯಿಂದಾಗಿ ಇಡೀ ದೇಶವೇ ದಿಗ್ಬ್ರಾಂತಕ್ಕೆ ಒಳಗಾಗಿದೆ. ಹೆಲಿಕಾಪ್ಟರ್‌ ಏಕೆ ಪತನಗೊಂಡಿತು ಎನ್ನುವ ಕುರಿತು ಉನ್ನತ ಮಟ್ಟದ ತನಿಖೆ ಮುಗಿದ ನಂತರ ಸತ್ಯಾಂಶ ತಿಳಿಯಲಿದೆ” ಎಂದಿದ್ದಾರೆ.

“ಜನರಲ್‌ ಬಿಪಿನ್‌ ರಾವತ್‌ ಅವರು ದೇಶ ಕಂಡ ಅಪ್ರತಿಮ ನಾಯಕ. ಅವರು ಜೀವನದುದ್ದಕ್ಕೂ ದೇಶ ಸೇವೆಯನ್ನೇ ಉಸಿರಾಗಿಸಿಕೊಂಡಿದ್ದರು. ಅವರು ದೇಶದ ಬಗ್ಗೆ ಕಂಡಿದ್ದ ಕನಸುಗಳನ್ನು ನನಸು ಮಾಡುವ ಕರ್ತವ್ಯ ಇಂದಿನ ಯುವಜನಾಂಗದ ಮೇಲಿದೆ” ಎಂದು ತಿಳಿಸಿದ್ದಾರೆ.

“ಬಿಪಿನ್‌ ರಾವತ್‌ ಅವರು ಕರ್ನಾಟಕದ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದರು. ಬೆಂಗಳೂರು, ಮಡಿಕೇರಿ ಮತ್ತಿತರ ಕಡೆ ಅನೇಕ ಸಲ ಬಂದಿದ್ದರು. ಭಾರತೀಯ ಸೇನಾ ಪಡೆಗೆ ನಮ್ಮ ರಾಜ್ಯವು ನೀಡಿರುವ ಕೊಡುಗೆಗಳ ಬಗ್ಗೆ ಅವರಿಗೆ ಅಪಾರವಾದ ಗೌರವವಿತ್ತು” ಎಂದಿದ್ದಾರೆ.

“ಪಾಕಿಸ್ತಾನ ವಿರುದ್ದ ವಾಯುದಾಳಿ, ಬರ್ಮಾ ವಿರುದ್ದ ಸರ್ಜಿಕಲ್‌ ಸ್ಟ್ರೈಕ್‌, ಚೀನಾ ಪಡೆಗಳನ್ನು ಹಿಮ್ಮೆಟ್ಟಿಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದಾಗಿತ್ತು. ದೇಶವು ಸ್ವಾವಲಂಬಿ ಆಗಬೇಕು ಎನ್ನುವುದು ಅವರ ಚಿಂತನೆಯಾಗಿತ್ತು. ಹಾಗಾಗಿ ಅವರು ಆತ್ಮ ನಿರ್ಭರ್‌ ಯೋಜನೆಗೆ ಒತ್ತು ನೀಡಿದ್ದರು” ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

16 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

17 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

17 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

18 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

18 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

18 hours ago