ಕೊಚ್ಚಿ: ನಿರ್ದೇಶಕ ಅಲಿ ಅಕ್ಬರ್, ಪತ್ನಿ ಅವರು ಮುಸ್ಲಿಂ ಧರ್ಮದಿಂದ ಹಿಂದು ಧರ್ಮಕ್ಕೆ ಮತಾಂತರ ಆಗಿದ್ದಾರೆ. ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಇತರೆ 12 ಮಂದಿ ತಮಿಳುನಾಡಿನ ಕೂನೂರು ಸಮೀಪ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಘಟನೆಯನ್ನು ಕೆಲವರು ಸಂಭ್ರಮಿಸಿದ್ದರು. ಇದನ್ನು ಕಂಡು ಅಲಿ ಅಕ್ಬರ್ ಕುಟುಂಬ ಈ ನಿರ್ಧಾರ ತೆಗೆದುಕೊಂಡಿದೆ.
ರಾಷ್ಟ್ರ ವಿರೋಧಿ ಪ್ರಕ್ರಿಯೆ ಮಾಡಿದವರನ್ನೂ ಕೂಡ ಇಸ್ಲಾಂ ಧರ್ಮದ ನಾಯಕರು ವಿರೋಧಿಸುವುದಿಲ್ಲ. ಈ ಧರ್ಮದಲ್ಲಿ ನಂಬಿಕೆ ಕಳೆದುಕೊಂಡಿರುವೆ ಎಂದು ಅಲಿ ಅಕ್ಬರ್ ಅವರು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಕಂಡು ಕೆಲವರು ಅವರನ್ನು ನಿಂದಿಸಿದ್ದರು. ಹೀಗಾಗಿ ಆ ವಿಡಿಯೋ ಫೇಸ್ಬುಕ್ನಿಂದ ಡಿಲಿಟ್ ಆಗಿದೆ. ಆದರೆ ವಾಟ್ಸಾಪ್ನಲ್ಲಿ ಹರಿದಾಡುತ್ತಿದೆ. ಹಿಂದು ಧರ್ಮಕ್ಕೆ ಮತಾಂತರ ಆಗಿದ್ದಕ್ಕೆ ಅಲಿಯನ್ನು ಸಾಕಷ್ಟು ಜನರು ನಿಂದಿಸಿದ್ದು, ಅದಕ್ಕೆ ಅವರು ತನ್ನದೇ ಆದ ಶೈಲಿಯಲ್ಲಿ ಉತ್ತರ ನೀಡಿದ್ದಾರೆ.
“ನಾನು ಜನ್ಮದಿಂದ ಹಾಕಿದ್ದ ಉಡುಗೆಯನ್ನು ನಾನು ಬಿಚ್ಚಿ ಎಸೆಯುತ್ತಿರುವೆ. ಇಂದಿನ ನಂತರ ನಾನು ಮುಸ್ಲಿಂ ಆಗಿರೋದಿಲ್ಲ. ನಾನು ಭಾರತೀಯ. ಭಾರತದ ವಿರುದ್ಧ ನಗುತ್ತಿರುವ ಇಮೋಜಿಗಳನ್ನು ಕಳಿಸಿದವರಿಗೆ ಇದು ನನ್ನ ಉತ್ತರ. ರಾವತ್ ಸಾವನ್ನು ಸಂಭ್ರಮಿಸುವುದರ ಜೊತೆಗೆ ಸಾಕಷ್ಟು ರಾಷ್ಟ್ರ ವಿರೋಧಿ ಚಟುವಟಿಕೆಗಳು ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿವೆ” ಎಂದು ಅಲಿ ಅಕ್ಬರ್ ಅಭಿಪ್ರಾಯ ಹೊರಹಾಕಿದ್ದಾರೆ.
ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದವರಲ್ಲಿ ಅನೇಕರು ಮುಸ್ಲಿಮರು. ಪಾಕಿಸ್ತಾನದ ವಿರುದ್ಧ ಸಾಕಷ್ಟು ಕ್ರಮಗಳನ್ನು ರಾವತ್ ಮಾಡಿದ್ದರು ಎಂದು ಈ ರೀತಿ ಕಾಮೆಂಟ್ ಮಾಡುತ್ತಿದ್ದಾರೆ. ಸಾಕಷ್ಟು ಜನರು ದೇಶವನ್ನು ಬಿಪಿನ್ ರಾವತ್ ಅವರನ್ನು ಅಗೌರವಿಸಿದ್ದಾರೆ. ಇದರ ಬಗ್ಗೆ ಮುಸ್ಲಿಂ ಧರ್ಮದ ನಾಯಕರು ಕೂಡ ಏನೂ ಹೇಳಿಲ್ಲ. ಹೀಗಾಗಿ ನಾನು ಈ ಧರ್ಮದಲ್ಲಿ ಇರಲು ಬಯಸೋದಿಲ್ಲ” ಎಂದು ಅಲಿ ಅಕ್ಬರ್ ಹೇಳಿದ್ದಾರೆ.
“ನಾನು ಹಾಗೂ ನನ್ನ ಪತ್ನಿ ಹಿಂದು ಧರ್ಮಕ್ಕೆ ಮತಾಂತರ ಆಗಲಿದ್ದೇವೆ, ಅದಕ್ಕೆ ಕೆಲ ಪ್ರಕ್ರಿಯೆಗಳು ನಡೆಯಬೇಕಿವೆ. ಆದರೆ ನನ್ನ ಇಬ್ಬರು ಮಕ್ಕಳಿಗೆ ಮಾತ್ರ ಅವರಿಗೆ ಮನಸ್ಸಿಗೆ ಬಂದಹಾಗೆ ನಿರ್ಧಾರ ತೆಗೆದುಕೊಳ್ಳಲು ಹೇಳುವೆ, ನಾನು ಒತ್ತಡ ಹೇರುವುದಿಲ್ಲ” ಎಂದು ಅಲಿ ಅಕ್ಬರ್ ಹೇಳಿದ್ದಾರೆ.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ…