ಬೆಳಗಾವಿ: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಸಂಭವಿಸಿದೆ. ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ಬಾಣಂತಿ ಅಂಜಲಿ ಪಾಟೀಲ್ (31) ಮೃತಪಟ್ಟವರು. ಹೆಣ್ಣು ಮಗು ಆರೋಗ್ಯವಾಗಿದ್ದು, ಮಹಿಳೆ ಮೃತಪಟ್ಟಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನಾರ್ಮಲ್ ಹೆರಿಗೆ ಆಗುತ್ತದೆ ಎಂದು ವೈದ್ಯರು ಮೊದಲು ಹೇಳಿದ್ದರು. ಆಮೇಲೆ ಸಿಜೇರಿಯನ್ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ವೈದ್ಯರು ಚಿಕಿತ್ಸೆ ನೀಡಿಲ್ಲ. ಹಾಗಾಗಿ, ಅಂಜಲಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ದೂರಿದ್ದಾರೆ. ಆಸ್ಪತ್ರೆ ಮುಂದೆ ಮೃತ ಅಂಜಲಿ ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ವೈದ್ಯರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಶವಾಗಾರದ ಮುಂದೆ ಕುಟುಂಬಸ್ಥರು ಪ್ರತಿಭಟನೆ ಮಾಡಿದರು.
ವೈದ್ಯರ ಸ್ಪಷ್ಟನೆ ಹೀಗಿದೆ; ಬಿಮ್ಸ್ ಹೆರಿಗೆ ವಿಭಾಗದ ಮುಖ್ಯಸ್ಥ ಡಾ. ವಸಂತ ಕಬ್ಬೂರ ಘಟನೆ ಕುರಿತು ಮಾಹಿತಿ ನೀಡಿದ್ದು, ನಿನ್ನೆ ಸಂಜೆ ನಾಲ್ಕು ಗಂಟೆಗೆ ಅಂಜಲಿ ಪಾಟೀಲ ಒಪಿಡಿಗೆ ಬಂದಿದ್ದರು. ಜ.22ಕ್ಕೆ ಅಂಜಲಿ ಅವರಿಗೆ ಹೆರಿಗೆ ದಿನಾಂಕ ನೀಡಲಾಗಿತ್ತು. ಒಪಿಡಿಯಲ್ಲಿ ಪರಿಶೀಲನೆ ನಡೆಸಿದಾಗ ಮಗುವಿನ ಹಾರ್ಟ್ಬೀಟ್ ಕಡಿಮೆ ಆಗಿತ್ತು. ಆ ಕಾರಣಕ್ಕೆ ಸಿಜೇರಿಯನ್ ಮೂಲಕ ರಾತ್ರಿ 11.05ಕ್ಕೆ ಹೆರಿಗೆ ಮಾಡಲಾಗಿದೆ. ಬೆಳಗ್ಗೆ 5ಕ್ಕೆ ಅಂಜಲಿ ಸಾವನ್ನಪ್ಪಿದ್ದಾರೆ. ಅವರಿಗೆ ರಕ್ತ ಹೆಪ್ಪುಗಟ್ಟಿ ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಅಂಜಲಿ ಸಾವಿಗೆ ಆಮ್ನಿಯೊಟೆಕ್ ಫ್ಲೂಯಿಡ್ ಎಂಬಾಲೀಸ್ ಕಾರಣ ಎಂಬುದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದರು.
ಬಿಮ್ಸ್ ನಿರ್ದೇಶಕ ಡಾ. ಅಶೋಕಕುಮಾರ ಶೆಟ್ಟಿ ಮಾತನಾಡಿ, ಇದರಲ್ಲಿ ವೈದ್ಯರ ನಿರ್ಲಕ್ಷ್ಯ ಕಂಡು ಬಂದಿಲ್ಲ. ಪ್ರತಿವರ್ಷ ಸುಮಾರು 10 ಸಾವಿರ ಹೆರಿಗೆ ಆಗುತ್ತವೆ. ಅದರಲ್ಲಿ 6 ಸಾವಿರ ಹೈ ರಿಸ್ಕ್ ಸಿಜೇರಿಯನ್ ಆಗುತ್ತವೆ. ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದಾಖಲಾದ ಗರ್ಭಿಣಿಯರು ಕೊನೆ ಘಳಿಗೆಯಲ್ಲಿ ಗಂಭೀರ ಸ್ಥಿತಿಯಲ್ಲಿ ನಮ್ಮಲ್ಲಿಗೆ ಬರುತ್ತಾರೆ. ಹಾಗಾಗಿ, ಹಿರಿಯ ವೈದ್ಯರು ಆ ಬಾಣಂತಿ ಜೀವ ಉಳಿಸಲು ಸಾಕಷ್ಟು ಪ್ರಯತ್ನಿಸಿದ್ದಾರೆ. ಆದರೆ, ಅದು ಸಫಲವಾಗಿಲ್ಲ. ಇನ್ನು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಕಡಿಮೆ ಸಾವಿನ ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…