Featured

ಬಿಮ್ಸ್​ನಲ್ಲಿ ಬಾಣಂತಿ ಸಾವು: ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ ; ಕುಟುಂಬಸ್ಥರ ಪ್ರತಿಭಟನೆ – vishwanews24

ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು ಪ್ರಕರಣ : ವೈದ್ಯರ ವಿರುದ್ಧ ತೀವ್ರ ಆಕ್ರೋಶ

ಶವಾಗಾರದ ಮುಂದೆ ಕುಟುಂಬಸ್ಥರು ಪ್ರತಿಭಟನೆ

ವೈದ್ಯರ ಸ್ಪಷ್ಟನೆ ಹೀಗಿದೆ..

ಬೆಳಗಾವಿ: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿ ಬಾಣಂತಿ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಸಂಭವಿಸಿದೆ. ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದ ಬಾಣಂತಿ ಅಂಜಲಿ ಪಾಟೀಲ್ (31) ಮೃತಪಟ್ಟವರು. ಹೆಣ್ಣು ಮಗು ಆರೋಗ್ಯವಾಗಿದ್ದು, ಮಹಿಳೆ ಮೃತಪಟ್ಟಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ನಾರ್ಮಲ್ ಹೆರಿಗೆ ಆಗುತ್ತದೆ ಎಂದು ವೈದ್ಯರು ಮೊದಲು ಹೇಳಿದ್ದರು. ಆಮೇಲೆ ಸಿಜೇರಿಯನ್ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ವೈದ್ಯರು ಚಿಕಿತ್ಸೆ ನೀಡಿಲ್ಲ‌. ಹಾಗಾಗಿ, ಅಂಜಲಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ದೂರಿದ್ದಾರೆ. ಆಸ್ಪತ್ರೆ ಮುಂದೆ ಮೃತ ಅಂಜಲಿ ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ವೈದ್ಯರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಶವಾಗಾರದ ಮುಂದೆ ಕುಟುಂಬಸ್ಥರು ಪ್ರತಿಭಟನೆ ಮಾಡಿದರು.

ವೈದ್ಯರ ಸ್ಪಷ್ಟನೆ ಹೀಗಿದೆ; ಬಿಮ್ಸ್ ಹೆರಿಗೆ ವಿಭಾಗದ ಮುಖ್ಯಸ್ಥ ಡಾ. ವಸಂತ ಕಬ್ಬೂರ ಘಟನೆ ಕುರಿತು ಮಾಹಿತಿ ನೀಡಿದ್ದು, ನಿನ್ನೆ ಸಂಜೆ ನಾಲ್ಕು ಗಂಟೆಗೆ ಅಂಜಲಿ ಪಾಟೀಲ ಒಪಿಡಿಗೆ ಬಂದಿದ್ದರು. ಜ.22ಕ್ಕೆ ಅಂಜಲಿ ಅವರಿಗೆ ಹೆರಿಗೆ ದಿನಾಂಕ ನೀಡಲಾಗಿತ್ತು. ಒಪಿಡಿಯಲ್ಲಿ ಪರಿಶೀಲನೆ ನಡೆಸಿದಾಗ ಮಗುವಿನ ಹಾರ್ಟ್‌ಬೀಟ್ ಕಡಿಮೆ ಆಗಿತ್ತು. ಆ ಕಾರಣಕ್ಕೆ ಸಿಜೇರಿಯನ್ ಮೂಲಕ ರಾತ್ರಿ 11.05ಕ್ಕೆ ಹೆರಿಗೆ ಮಾಡಲಾಗಿದೆ. ಬೆಳಗ್ಗೆ 5ಕ್ಕೆ ಅಂಜಲಿ ಸಾವನ್ನಪ್ಪಿದ್ದಾರೆ. ಅವರಿಗೆ ರಕ್ತ ಹೆಪ್ಪುಗಟ್ಟಿ ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಅಂಜಲಿ ಸಾವಿಗೆ ಆಮ್ನಿಯೊಟೆಕ್ ಫ್ಲೂಯಿಡ್ ಎಂಬಾಲೀಸ್ ಕಾರಣ ಎಂಬುದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದರು.

ಬಿಮ್ಸ್ ನಿರ್ದೇಶಕ ಡಾ. ಅಶೋಕಕುಮಾರ ಶೆಟ್ಟಿ ಮಾತನಾಡಿ, ಇದರಲ್ಲಿ ವೈದ್ಯರ ನಿರ್ಲಕ್ಷ್ಯ ಕಂಡು ಬಂದಿಲ್ಲ. ಪ್ರತಿವರ್ಷ ಸುಮಾರು 10 ಸಾವಿರ ಹೆರಿಗೆ ಆಗುತ್ತವೆ. ಅದರಲ್ಲಿ‌ 6 ಸಾವಿರ ಹೈ ರಿಸ್ಕ್ ಸಿಜೇರಿಯನ್ ಆಗುತ್ತವೆ. ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದಾಖಲಾದ ಗರ್ಭಿಣಿಯರು ಕೊನೆ ಘಳಿಗೆಯಲ್ಲಿ ಗಂಭೀರ ಸ್ಥಿತಿಯಲ್ಲಿ ನಮ್ಮಲ್ಲಿಗೆ ಬರುತ್ತಾರೆ. ಹಾಗಾಗಿ, ಹಿರಿಯ ವೈದ್ಯರು ಆ ಬಾಣಂತಿ ಜೀವ ಉಳಿಸಲು ಸಾಕಷ್ಟು ಪ್ರಯತ್ನಿಸಿದ್ದಾರೆ‌. ಆದರೆ, ಅದು ಸಫಲವಾಗಿಲ್ಲ. ಇನ್ನು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಕಡಿಮೆ ಸಾವಿನ ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

3 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

3 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

3 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

6 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

7 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

7 hours ago