ಬೆಂಗಳೂರು : ‘ಬಿಗ್ ಬಾಸ್’ ಕನ್ನಡದ ಸ್ಪರ್ಧಿ, ನಟ ಕಿರಿಕ್ ಕೀರ್ತಿ ಅವರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿದ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಸದಾಶಿವನಗರದ ಪಬ್ ನಲ್ಲಿ ಗುರುವಾರ ರಾತ್ರಿ ಕಿರಿಕ್ ಕೀರ್ತಿ ಸ್ನೇಹಿತರ ಜೊತೆಗೆ ಇದ್ದು, ಈ ವೇಳೆ ಅವರ ಫೋಟೊ ಕ್ಲಿಕ್ಕಿಸಿದ್ದಕ್ಕೆ ಜಗಳವಾಗಿದೆ. ಪಕ್ಕದ ಟೇಬಲ್ ನಲ್ಲಿದ್ದ ವ್ಯಕ್ತಿ ಫೋಟೋ ಕ್ಲಿಕ್ಕಿಸಿದ್ದನ್ನು ಕೀರ್ತಿ ಪ್ರಶ್ನೆ ಮಾಡಿದ್ದು, ಫೋಟೋ ಕ್ಲಿಕ್ಕಿಸಿದ ವ್ಯಕ್ತಿ ಕ್ಷಮೆ ಕೇಳಿದರೂ ಬಿಡದೆ ಕಿರಿಕ್ ಕೀರ್ತಿ ಬಾಯಿಗೆ ಬಂದಂತೆ ಮಾತನಾಡಿದ್ದಾರೆ.
ಇನ್ನು ಆ ಬಳಿಕ ವ್ಯಕ್ತಿಯ ಮೊಬೈಲ್ ಕಸಿದುಕೊಳ್ಳಲು ಕೀರ್ತಿ ಪ್ರಯತ್ನ ನಡೆಸಿದ್ದು, ಈ ವೇಳೆ ರೋಸಿ ಹೋದ ವ್ಯಕ್ತಿ ಕೀರ್ತಿ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…