Featured

ಬಿರುಗಾಳಿಯಿಂದ ಅಪಾಯಕ್ಕೆ ಸಿಲುಕಿದ್ದ  24 ಮೀನುಗಾರರ ಮಂಗಳೂರು ಕೋಸ್ಟ್ ಗಾರ್ಡ್ ನೌಕೆಯ ಮೂಲಕ ರಕ್ಷಣೆ -Vishwanews24

ಬಿರುಗಾಳಿಯಿಂದ ಅಪಾಯಕ್ಕೆ ಸಿಲುಕಿದ್ದ  24 ಮೀನುಗಾರರ ಮಂಗಳೂರು ಕೋಸ್ಟ್ ಗಾರ್ಡ್ ನೌಕೆಯ ಮೂಲಕ ರಕ್ಷಣೆ -Vishwanews24

ಕಾರವಾರ: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಬಿರುಗಾಳಿಯಿಂದ ಅಪಾಯಕ್ಕೆ ಸಿಲುಕಿದ್ದ 24 ಮೀನುಗಾರರನ್ನು ಮಂಗಳೂರು ಕೋಸ್ಟ್ ಗಾರ್ಡ್ ನೌಕೆಯ ಮೂಲಕ ರಕ್ಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಹಾಗೂ ಹೊನ್ನಾವರ ತೀರದಿಂದ ಸುಮಾರು 15 ಕಿಮೀ ಆಳ ಸಮುದ್ರದಲ್ಲಿ ನೇತ್ರಾಣಿ ನಡುಗಡ್ಡೆ ಸಮೀಪ ಕಮರುಲ್ ಬಾಹರ್ ಎಂಬ ಮೀನುಗಾರಿಕೆ ಬೋಟ್ ಗುರುವಾರದಿಂದ ಅಪಾಯಕ್ಕೆ ಸಿಕ್ಕಿಹಾಕಿಕೊಂಡಿತ್ತು.

ಇಂಜಿನ್ ಗೆ ಹಾನಿಯಾಗಿತ್ತು. ಬೋಟ್ ಮುಳುಗುವ ಹಂತದಲ್ಲಿತ್ತು. ಬೋಟ್ ನಲ್ಲಿದ್ದ 24 ಮೀನುಗಾರರು ರಕ್ಷಣೆಗೆ ಮೊರೆ ಇಟ್ಟಿದ್ದರು. ಮಂಗಳೂರಿನಿಂದ ವಿಶೇಷ ನೌಕೆಯ ಮೂಲಕ ಆಗಮಿಸಿದ ಕೋಸ್ಟ್ ಗಾರ್ಡ್ ಅಧಿಕಾರಿಗಳು ಎಲ್ಲ ಮೀನುಗಾರರನ್ನು ರಕ್ಷಿಸಿ ದಡಕ್ಕೆ ಕರೆತಂದಿದ್ದಾರೆ.

ಉತ್ತರ ಕನ್ನಡ ಎಸ್ ಪಿ ಶಿವ ಪ್ರಕಾಶ ದೇವರಾಜು ಜಾಲತಾಣಗಳ ಮೂಲಕ ಕೋಸ್ಟ್ ಗಾರ್ಡ್ ಗೆ ಧನ್ಯವಾದ ತಿಳಿಸಿದ್ದಾರೆ.

ಗುರುವಾರದಿಂದ ಉತ್ತರ ಕನ್ನಡ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ.‌ ಕಾರವಾರದಲ್ಲಿ ಶುಕ್ರವಾರ 60 ಮಿಮೀಗೂ ಅಧಿಕ ಮಳೆಯಾಗಿದೆ. ಸೆ.12 ರವರೆಗೂ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.‌

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

3 hours ago