ಕಾಪು : ಬಿರುವೆರ್ ಕಾಪು ಸೇವಾ ಸಮಿತಿ ವತಿಯಿಂದ ಕಾಪು ಪೇಟೆಯಲ್ಲಿ ಹಾಲೆ ಮರದ ತೊಗಟೆಯಲ್ಲಿ ಸಿದ್ದ ಪಡಿಸಿದ ಕಷಾಯ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಿರುವೆರ್ ಕಾಪು ಸೇವಾ ಸಮಿತಿ ಸದಸ್ಯೆ ಅಶ್ವಿನಿ ಮಾತನಾಡಿ, ತುಳುನಾಡಿನ ಆಚರಣೆಗಳಲ್ಲೊಂದಾಗಿರುವ ಆಟಿದ ಅಮವಾಸ್ಯೆಯಂದು ಹಾಲೆ ಮರದಲ್ಲಿ ಸರ್ವ ರೋಗ ನಿವಾರಣೆ ಮಾಡುವ ಶಕ್ತಿ ಕಷಾಯಕ್ಕೆ ಇದೆ ಎಂಬ ನಂಬಿಕೆ ಇದೆ. ಇಂದಿನ ಆಧುನಿಕ ಯುಗದಲ್ಲಿ ಪೇಟೆ ಭಾಗದ ಜನರು ಆಟಿದ ಕಷಾಯದಿಂದ ವಂಚಿತರಾಗುವಂತಾಗಿದ್ದು ಪ್ರತೀ ಮನೆಗೂ ಕಷಾಯ ತಲುಪಿಸಬೇಕೆಂಬ ಉದ್ದೇಶದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸುಮಾರು 50 ಲೀಟರ್ ನಷ್ಟು ಹಾಲೆ ಮರದ ಕೆತ್ತೆಯ ಕಷಾಯವನ್ನು ಸಿದ್ಧ ಪಡಿಸಲಾಗಿದ್ದು, ಕಾಪು ಪೇಟೆಯಲ್ಲಿ ಸರ್ವ ಧರ್ಮಿಯರು ಸಹಿತ ನೂರಾರು ಮಂದಿ ಕಷಾಯ ಸ್ವೀಕರಿಸಿರು.
ಗುರುವಾರ ಮುಂಜಾನೆ 3 ಗಂಟೆಗೆ ಎದ್ದು, ಇನ್ನಂಜೆ, ಮಡುಂಬು, ಕಾಪು ಮೊದಲಾದ ಕಡೆಗಳಲ್ಲಿ ಹಾಲೆ ಮರದ ಕೆತ್ತೆಯನ್ನು ಸಂಗ್ರಹಿಸಿ, ಸಾಂಪ್ರದಾಯಿಕ ಶೈಲಿಯಲ್ಲಿ ಆಟಿದ ಕಷಾಯವನ್ನು ಸಿದ್ಧಪಡಿಸಲಾಗಿದ್ದು, ಕಾಪು ಪೇಟೆಯಲ್ಲಿ ನೂರಾರು ಮಂದಿ ನಾಗರಿಕರಿಗೆ ಉಚಿತವಾಗಿ ವಿತರಿಸುವ ಮೂಲಕ ಬಿರುವೆರ್ ಕಾಪು ಸೇವಾ ಟ್ರಸ್ಟ್ ನ ಸದಸ್ಯರು ಮಾದರಿಯಾಗಿದ್ದಾರೆ.
, ಬಿರುವೆರ್ ಕಾಪು ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ವಿಕ್ಕಿ ಪೂಜಾರಿ ಮಡುಂಬು, ಸದಸ್ಯರಾದ ಪ್ರಶಾಂತ್ ಪೂಜಾರಿ, ಸೃಜನ್ ಎಲ್. ಸುವರ್ಣ, ಮನೋಹರ್ ಕಲ್ಲುಗುಡ್ಡೆ, ಅತಿಥ್ ಸುವರ್ಣ ಪಾಲಮೆ, ಜೀವನ್ ಶೆಟ್ಟಿ, ಪ್ರಜ್ವಲ್ ಶೆಟ್ಟಿ, ರೂಪೇಶ್, ದಾಮೋದರ್ ಕಾಪು ಮೊದಲಾದವರು ಉಪಸ್ಥಿತರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…