Featured

ಬಿಲ್ಕಿಸ್‌ ಬಾನು ಪ್ರಕರಣ : ಜ. 21 ರೊಳಗೆ ಅಪರಾಧಿಗಳು ಶರಣಾಗುವಂತೆ ಸುಪ್ರೀಂ ಆದೇಶ – vishwanews24

ಬಿಲ್ಕಿಸ್‌ ಬಾನು ಪ್ರಕರಣ : ಜ. 21 ರೊಳಗೆ ಅಪರಾಧಿಗಳು ಶರಣಾಗುವಂತೆ ಸುಪ್ರೀಂ ಆದೇಶ

ನವದೆಹಲಿ : ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಹೆಚ್ಚುವರಿ ಕಾಲಾವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಅದರಂತೆ ನ್ಯಾಯಾಲಯವು ನಿಗದಿಪಡಿಸಿದ ಪ್ರಕಾರ ಜನವರಿ 21 ರೊಳಗೆ ಎಲ್ಲಾ 11 ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಆದೇಶಿಸಿದೆ.

2002ರ ಗುಜರಾತ್ ಗಲಭೆಯ ವೇಳೆ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಎಸಗಿದ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ ಆರೋಪದಲ್ಲಿ ಹನ್ನೊಂದು ಅಪರಾಧಿಗಳು ಸುಪ್ರೀಂ ಕೋರ್ಟ್ ಶಿಕ್ಷೆಗೆ ಗುರಿಯಾಗಿದ್ದರು. ಆದರೆ ಆಗಸ್ಟ್ 14, 2023ರಂದು, ಅಪರಾಧಿಗಳನ್ನು ಗುಜರಾತ್ ಸರ್ಕಾರ ಅವಧಿಪೂರ್ವವಾಗಿ ಬಿಡುಗಡೆ ಮಾಡಿತ್ತು. ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆ ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದರು.

ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠ ಜನವರಿ 8ರಂದು ಗುಜರಾತ್ ಸರ್ಕಾರದ ಬಿಡುಗಡೆ ಆದೇಶವನ್ನು ರದ್ದುಗೊಳಿಸಿತ್ತು.ಅಲ್ಲದೇ ಎಲ್ಲಾ ಹನ್ನೊಂದು ಅಪರಾಧಿಗಳಿಗೆ ಎರಡು ವಾರಗಳಲ್ಲಿ ಶರಣಾಗುವಂತೆ ನಿರ್ದೇಶಿಸಿತ್ತು.

ಕೋರ್ಟ್ ಆದೇಶ ಬರುತ್ತಿದ್ದಂತೆ ಹನ್ನೊಂದು ಮಂದಿ ಅಪರಾಧಿಗಳ ಪೈಕಿ ಮೂವರು ಅಪರಾಧಿಗಳು ಶರಣಾಗಲು ಹೆಚ್ಚಿನ ಕಾಲಾವಕಾಶ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ಪೀಠವು ಅರ್ಜಿಗಳಿಗೆ ಅರ್ಹತೆಯ ಕೊರತೆಯಿದೆ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ. ಮುಂದಿನ ಭಾನುವಾರದೊಳಗೆ ಅಂದರೆ ಜ.21 ರೊಳಗೆ ಎಲ್ಲ ಅಪರಾಧಿಗಳು ಜೈಲು ಅಧಿಕಾರಿಗಳಿಗೆ ವರದಿ ಮಾಡುವಂತೆ ಆದೇಶಿಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

12 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago