ಉಡುಪಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ಆದೇಶವನ್ನು ರದ್ದು ಪಡಿಸಿದ ಸುಪ್ರಿಂ ಕೋರ್ಟ್ ನ ತೀರ್ಪು ಇಡೀ ಮಹಿಳಾ ಸಮುದಾಯಕ್ಕೆ ಸಂದ ಜಯವಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೊ ಹೇಳಿದ್ದಾರೆ.
ದೇಶದ ಹಲವು ಮೂಲೆಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ನೊಂದ ಮಹಿಳೆಯರು ನ್ಯಾಯ ಸಿಗದೆ ಸಮಸ್ಯೆ ಅನುಭವಿಸುತ್ತಿರುವ ಸಂದರ್ಭದಲ್ಲಿ ಸುಪ್ರಿಂ ಕೋರ್ಟ್ ನೀಡಿರುವ ತೀರ್ಪು ಅಂತಹ ಮಹಿಳೆಯರಿಗೆ ಅಶಾವಾದದಿಂದ ಬದುಕಲು ಪ್ರೇರೆಪಣೆ ನೀಡಿದಂತಾಗಿದೆ.
ಬಿಲ್ಕಿಸ್ ಬಾನು ಪ್ರಕರಣದಲ್ಲಿ ಮಹಾರಾಷ್ಟ್ರ ನ್ಯಾಯಾಲಯ ಎಲ್ಲಾ ದೋಷಿಗಳಿಗೆ ಶಿಕ್ಷೆ ವಿಧಿಸಿದ್ದು, ಅವರನ್ನು ಬಿಡುಗಡೆ ಮಾಡುವ ಮೂಲಕ ಗುಜರಾತ್ ಸರ್ಕಾರ ತಪ್ಪು ನಿರ್ಧಾರಕ್ಕೆ ಕೈ ಹಾಕಿತ್ತು. ಇದರ ವಿರುದ್ದ ಮೇಲ್ಮನವಿ ಸಲ್ಲಿಸಿದ್ದರ ಪರಿಣಾಮ ದೋಷಿಗಳ ಬಿಡುಗಡೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿರುವುದು ಸ್ವಾಗತಾರ್ಹ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಗೋದ್ರೋತ್ತರ ಹತ್ಯಾಕಾಂಡದಲ್ಲಿ ಈ ಪ್ರಕರಣವೂ ಒಂದಾಗಿದ್ದು ಈ ಪ್ರಕರಣದಲ್ಲಿ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೆ ಆಕೆಯ ಕುಟುಂಬದ 7 ಸದಸ್ಯರನ್ನು ಹತ್ಯೆ ಮಾಡಲಾಗಿತ್ತು.
ಇಂತಹ ಹೇಯ ಕೃತ್ಯ ಎಸಗಿದ್ದ 11 ಅಪರಾಧಿಗಳನ್ನು ಗುಜರಾತ್ ಸರ್ಕಾರ ಅವಧಿಪೂರ್ವವಾಗಿ ಬಿಡುಗಡೆ ಮಾಡುವ ಮೂಲಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕುವ ಕೆಲಸ ಮಾಡಿತ್ತು. ಒಂದು ಕಡೆ ಬೇಟಿ ಬಚಾವೋ,ಬೇಟಿ ಪಡಾವೋ., ಎಂದು ನಾಟಕ ಮಾಡುವ ಬಿಜೆಪಿಗರು ಬಿಲ್ಕಿಸ್ ಬಾನು ಪ್ರಕರಣದಲ್ಲಿ ಆಕೆ ಒಂದು ಹೆಣ್ಣು ಮಗಳು ಎಂಬುದನ್ನು ಮರೆತು ಅಪರಾಧಿಗಳ ಬಿಡುಗಡೆಯನ್ನು ಸಂಭ್ರಮಿಸಿದ್ದರು. ಸುಪ್ರೀಂ ಕೋರ್ಟ್ನ ತೀರ್ಪು ನ್ಯಾಯಾಂಗ ವ್ಯವಸ್ಥೆಯ ಮೇಲೆ ಇನ್ನೂ ನಂಬಿಕೆ ಉಳಿಸಿಕೊಳ್ಳಬಹುದು ಎಂಬ ಭಾವನೆ ಮೂಡಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…
ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…