ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಣೆ ಕುರಿತು ಮುಖ್ಯಮಂತ್ರಿಯವರು ನೀಡಿದ ಭರವಸೆ ಸುಳ್ಳಾಗಿದೆ.
ಸಮಾಜದ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ಸಲುವಾಗಿ ಸಚಿವರಾದ ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಲ್ಲವ ಸಮುದಾಯದ ಮುಖಂಡರ ನಿಯೋಗ ಸಿಎಂ ಬಸವರಾಜ್ ಬೊಮ್ಮಾಯಿಗೆ ಜ.5ರಂದು ಮನವಿ ಸಲ್ಲಿಸಿದ್ದ ಸಂದರ್ಭ ನಿಗಮ ಸ್ಥಾಪನೆಗೆ ಸ್ಪಷ್ಟ ಭರವಸೆಯ ಒಪ್ಪಿಗೆ ನೀಡಿ ಸೂಕ್ತ ಅನುದಾನದೊಂದಿಗೆ ಈ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡುವುದಾಗಿ ತಿಳಿಸಿದ್ದರು. ಆದರೂ ಈ ಬಾರಿಯ ಬಜೆಟ್ನಲ್ಲಿ ಯಾವುದೆ ಕ್ರಮ ಕೈಗೊಳ್ಳದೆ ಮತ್ತೆ ಬಿಲ್ಲವ, ಈಡಿಗರಿಗೆ ಅನ್ಯಾಯವೆಸಗಿದ್ದಾರೆ.
ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮಾಜದ ಅಭಿವೃದ್ಧಿ ಹಾಗೂ ನಾರಾಯಣ ಗುರು ತತ್ವ ಆದರ್ಶಗಳ ಪ್ರಚಾರ ದೃಷ್ಟಿಯಿಂದ ನಿಗಮ ಸ್ಥಾಪನೆ ಅಗತ್ಯವಾಗಿದ್ದರೂ ಹಿಂದುಳಿದ ಸಮಾಜದ ನಮಗೆ ಅನ್ಯಾಯವಾಗಿದೆ. ಸಮಾಜದ ಮುಖಂಡರ ಸಭೆ ನಡೆಸಿ ನಿಯೋಗ ಕೊಂಡೊಯ್ದ ಮಾನ್ಯ ಸುನಿಲ್ ಕುಮಾರ್ರವರು ಹಾಗೂ ಆಶ್ವಾಸನೆಯನ್ನು ಸ್ವಾಗತಿಸಿ ಬೆಂಬಲಿಸಿದ ಜನಪ್ರತಿನಿಧಿಗಳೆಲ್ಲರೂ ಈ ಕುರಿತು ಸ್ಪಷ್ಟನೆ ನೀಡುವಂತೆ ಸಮಸ್ತ ಸಮಾಜಬಾಂಧವರ ಹಿತದಿಂದ ಆಗ್ರಹಿಸುತ್ತೇನೆ.
*ಪ್ರವೀಣ್ ಎಂ ಪೂಜಾರಿ*
ಅಧ್ಯಕ್ಷರು, ಬಿಲ್ಲವ ಯುವ ವೇದಿಕೆ (ರಿ) ಉಡುಪಿ
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…