Featured

ಬಿಲ್ಲವ – ಈಡಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಬಗೆಗಿನ ಪ್ರಸ್ತಾಪ ಸ್ವಾಗತಾರ್ಹ : ಡಾ| ಅಶ್ವಥ ನಾರಾಯಣ -Vishwanews24

ಬಿಲ್ಲವ – ಈಡಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಬಗೆಗಿನ ಪ್ರಸ್ತಾಪ ಸ್ವಾಗತಾರ್ಹ :ಡಾ| ಅಶ್ವಥ ನಾರಾಯಣ -Vishwanews24

ವಿವಿಧ ಜಾತಿ, ಪಂಗಡ ಮತ್ತು ಸಮುದಾಯಗಳ ಜನರ ಬೇಡಿಕೆಗೆ ಅನುಗುಣವಾಗಿ ಸ್ಪಂದಿಸುವುದು ಸರಕಾರದ ಜವಾಬ್ದಾರಿ

ಕಾಪು: ಬಿಲ್ಲವ – ಈಡಿಗ ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆಯ ವಿಚಾರದಲ್ಲಿ ನಡೆಯುತ್ತಿರುವ ಚರ್ಚೆ ಸ್ವಾಗತಾರ್ಹವೇ ಆಗಿದ್ದು, ವಿವಿಧ ಜಾತಿ, ಪಂಗಡ ಮತ್ತು ಸಮುದಾಯಗಳ ಜನರ ಬೇಡಿಕೆಗೆ ಅನುಗುಣವಾಗಿ ಸ್ಪಂದಿಸುವುದು ಸರಕಾರದ ಜವಾಬ್ದಾರಿಯಾಗಿದೆ. ಸಮುದಾಯದ ಜನರು ತಮ್ಮ ಸಮುದಾಯದ ಬೇಡಿಕೆಗಳನ್ನು ಸರಕಾರದ ಮುಂದಿಡುವುದು ಜನರ ಕರ್ತವ್ಯವಾಗಿದೆ. ಬಿಲ್ಲವ – ಈಡಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಬಗೆಗಿನ ಪ್ರಸ್ತಾಪ ಸ್ವಾಗತಾರ್ಹವಾಗಿದೆ ಎಂದ ಉಪಮುಖ್ಯಮಂತ್ರಿ ಡಾ| ಅಶ್ವಥ ನಾರಾಯಣ ಹೇಳಿದರು.

ಶುಕ್ರವಾರ ಸಂಜೆ ಬೆಳಪು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮಂಗಳೂರು ವಿವಿ ಸಂಯೋಜಿತ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ, ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಕಾಪು ವಿಧಾನಸಭಾ ಕ್ಷೇತ್ರದ ಬೆಳಪುವಿನಲ್ಲಿ ರಾಜ್ಯಕ್ಕೇ ಮಾದರಿಯಾಗುವಂತೆ ವಿಜ್ಞಾನ ಸಂಶೋಧನಾ ಕೇಂದ್ರ, ಸರಕಾರಿ ಪಾಲೆಟ್ನಿಕ್ ಕಾಲೇಜು ಮತ್ತು ಸಣ್ಣ ಕೈಗಾರಿಕಾ ಪಾರ್ಕ್ ನಿರ್ಮಾಣವಾಗುತ್ತಿರುವುದು ಸ್ವಾಗತಾರ್ಹವಾಗಿದೆ. ಇದಕ್ಕೆ ಪೂರಕವಾಗಿ ವಿವಿಧ ಮೂಲಗಳಿಂದ ಸಂಪನ್ಮೂಲಗಳನ್ನು ಕ್ರೋಡಿಸಿಕರಿಸಿಕೊಂಡು ವೇಗವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಲು ಪ್ರಯತ್ನಿಸಲಾಗುವುದು. ವಿಜ್ಞಾನ ಸಂಶೋಧನಾ ಕೇಂದ್ರ ಸಹಿತವಾಗಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜೋಡಿಸುವ ಮೂಲಕ ಬೆಳಪು ಮಾದರಿ ಗ್ರಾಮವಾಗಿ ಮೂಡಿ ಬರುತ್ತಿದೆ. ಮಾದರಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು, ಗ್ರಾಮಾಭಿವೃದ್ಧಿಗೆ ಪೂರಕವಾಗಿ ನಿರಂತರವಾಗಿ ಶ್ರಮಿಸುತ್ತಿರುವ ಶಾಸಕ ಲಾಲಾಜಿ ಆರ್. ಮೆಂಡನ್, ಗ್ರಾ. ಪಂ. ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರ ಸಮರ್ಪಣಾ ಮನೋಭಾವದ ಸೇವೆ ಶ್ಲಾಘನೀಯವಾಗಿದೆ ಎಂದರು.

ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಈಗಾಗಲೇ ಬಲಿಷ್ಟವಾಗಿ ಬೆಳೆದಿದ್ದು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸಂಘಟನಾತ್ಮಕವಾಗಿ ಮತ್ತಷ್ಟು ಬಲಯುತವಾಗಿದೆ. ಪ್ರತೀ ವ್ಯಕ್ತಿಯ ರಾಜಕೀಯ ಬುನಾದಿಗೆ ಗ್ರಾಮ ಪಂಚಾಯತ್ ಚುನಾವಣೆಯೇ ಪೂರಕವಾಗಿದ್ದು, ರಾಜ್ಯಾದ್ಯಂತ ಈ ಬಾರಿ ಗ್ರಾಮ ಪಂಚಾಯತ್‌ಗಳಲ್ಲಿ ಬಿಜೆಪಿ ಬೆಂಬಲಿತರ ಆಡಳಿತದ ನಿರೀಕ್ಷೆಯಲ್ಲಿದ್ದೇವೆ. ಅದಕ್ಕೆ ಪೂರ್ವಭಾವಿಯಾಗಿ ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಕೇಂದ್ರ-ರಾಜ್ಯಗಳು ನಡೆಸಿರುವ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಪ್ರಯತ್ನ ನಡೆಸುತ್ತಿದ್ದು, ಚುನಾವಣೆಗೆ ನಾವು ಸಿದ್ಧರಿದ್ದೇವೆ ಎಂದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಸಚಿವ ಸ್ಥಾನ ನಿರೀಕ್ಷೆಯ ಬಗ್ಗೆ ಮಾತನಾಡಿದ ಅವರು ರಾಜಕೀಯದಲ್ಲಿ ಎಲ್ಲರಿಗೂ ನಿರೀಕ್ಷೆ, ಆಕಾಂಕ್ಷೆಗಳು ಸಹಜ. ಇದ್ದ ಒಂದು ಸ್ಥಾನದಿಂದ ಮೇಲಿನ ಸ್ಥಾನಕ್ಕೆ ಹೋಗಬೇಕು. ಬೇರೆ ಬೇರೆ ಅವಕಾಶಗಳನ್ನು ಪಡೆದುಕೊಳ್ಳಬೇಕೆಂಬ ಜನಪ್ರತಿನಿಧಿಗಳ ಆಸೆ ಸಹಜವೇ ಆಗಿದೆ. ಶಾಸಕ ಲಾಲಾಜಿ ಅವರದ್ದು ಸರಳ ವ್ಯಕ್ತಿತ್ವವಾಗಿದ್ದು, ಪಕ್ಷ ಮತ್ತು ಸರಕಾರದಲ್ಲಿ ಅವರಿಗೆ ಒಳ್ಳೆಯ ಗೌರವವಿದೆ. ಸರಕಾರದಲ್ಲಿಯೂ ಒಳ್ಳೆಯ ಅವಕಾಶಗಳು ಸಿಗುವ ನಿರೀಕ್ಷೆಯಿದೆ. ಈ ಬಗ್ಗೆ ಮುಖ್ಯಮಂತ್ರಿಗಳೇ ನಿರ್ಧರಿಸುತ್ತಾರೆ ಎಂದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಜಿ. ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಬೆಳಪು ಗ್ರಾ.ಪಂ. ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ವಿವಿಧ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

6 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago