Featured

ಬಿಲ್ಲವ ಯುವಕರನ್ನು ಕೋಮು ಗಲಭೆಗಳಿಗೆ ಬಳಕೆ ಮಾಡಿ ಅಪರಾಧಿಗಳನ್ನಾಗಿ ಮಾಡಿದ್ದೇ ಬಿಜೆಪಿ ಸಾಧನೆ :ಮಧು ಬಂಗಾರಪ್ಪ- Vishwanews24

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಿಲ್ಲವರ ಯುವಕರನ್ನು ಕೋಮು ಗಲಭೆಗಳಿಗೆ ಬಳಕೆ ಮಾಡಿ ಅಪರಾಧಿಗಳನ್ನಾಗಿ ಮಾಡಿದ್ದೇ ಬಿಜೆಪಿ ಸಾಧನೆ ಎಂದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು.

ಮಂಗಳೂರಿನ ಕಾಂಗ್ರೆಸ್‌-ಜೆಡಿಎಸ್‌ ಚುನಾವಣಾ ಪ್ರಚಾರ ಕಚೇರಿಯಲ್ಲಿ nಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಆಣತಿಯಂತೆ ಕೆಲಸ ಮಾಡಿ ಬಿಲ್ಲವ ಯುವಕರು ಜೈಲು ಸೇರಿದ್ದಾರೆ. ಅವರನ್ನು ಜೈಲಿನಿಂದ ಬಿಡಿಸುವ ಮತ್ತು ಅವರ ಪರವಾಗಿ ವಕಾಲತ್ತು ವಹಿಸುವ ಕೆಲಸವನ್ನೂ ಬಿಜೆಪಿ ಮಾಡುತ್ತಿಲ್ಲ. ಅಮಾಯಕರನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ದ.ಕ. ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಮಿಥುನ್‌ ರೈ ಅವರನ್ನು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಗೂಂಡಾ ಎಂದು ಲೇವಡಿ ಮಾಡಿದ್ದಾರೆ. ಆದರೆ, ಈ ಮೊದಲು ಅಧಿಕಾರದಲ್ಲಿದ್ದಾಗ ಇದೇ ಅಶೋಕ್‌ ಅವರು ಆರೆಸ್ಸೆಸ್‌, ಬಜರಂಗ ದಳ ಕಾರ್ಯಕರ್ತರಿಗೆ ಗೂಂಡಾಗಳೆಂಬ ಪಟ್ಟ ಕಟ್ಟಿದ್ದರು. ಇಲ್ಲಿಯವರೆಗೆ ಆರೆಸ್ಸೆಸ್‌ನ ಗೂಂಡಾಗಳು ಕಾಣಿಸಲಿಲ್ಲವೇ ಎಂದರು.

ಕರಾವಳಿಯಲ್ಲಿ ಈ ಮೊದಲು ಬೆಂಕಿ ಹಚ್ಚುವ ಮಾತುಗಳೇ ಕೇಳಿಬರುತ್ತಿದ್ದವು. ಆದರೆ, ಮೈತ್ರಿ ಸರಕಾರ ಬಂದಾಗಿನಿಂದ ಕರಾವಳಿ ಭಾಗ ಶಾಂತಿಯುತ, ಸೌಹಾರ್ದದಿಂದ ಕೂಡಿದೆ. ಅಧಿಕಾರಿಗಳ ಮೂಲಕ ಸರಕಾರವು ಸೌಹಾರ್ದ ಮೆರೆಯುವಲ್ಲಿ ಯಶಸ್ಸನ್ನು ಕಂಡಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಬೆಂಬಲಿಸಬೇಕಿದೆ. ಕರಾವಳಿ ಪ್ರದೇಶದಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಮುಖಂಡರಾದ ಸುರೇಶ್‌ ಬಳ್ಳಾಲ್‌, ಟಿ.ಕೆ. ಸುಧೀರ್‌, ಎ.ಸಿ. ವಿನಯರಾಜ್‌, ಜೆಡಿಎಸ್‌ ಮುಖಂಡರಾದ ಮುಹಮ್ಮದ್‌ ಕುಂಞಿ, ಅಕ್ಷಿತ್‌ ಸುವರ್ಣ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago