Featured

ಬಿಲ್ಲವ ಯುವಕರನ್ನು ಕೋಮು ಗಲಭೆಗಳಿಗೆ ಬಳಕೆ ಮಾಡಿ ಅಪರಾಧಿಗಳನ್ನಾಗಿ ಮಾಡಿದ್ದೇ ಬಿಜೆಪಿ ಸಾಧನೆ :ಮಧು ಬಂಗಾರಪ್ಪ- Vishwanews24

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಿಲ್ಲವರ ಯುವಕರನ್ನು ಕೋಮು ಗಲಭೆಗಳಿಗೆ ಬಳಕೆ ಮಾಡಿ ಅಪರಾಧಿಗಳನ್ನಾಗಿ ಮಾಡಿದ್ದೇ ಬಿಜೆಪಿ ಸಾಧನೆ ಎಂದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು.

ಮಂಗಳೂರಿನ ಕಾಂಗ್ರೆಸ್‌-ಜೆಡಿಎಸ್‌ ಚುನಾವಣಾ ಪ್ರಚಾರ ಕಚೇರಿಯಲ್ಲಿ nಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಆಣತಿಯಂತೆ ಕೆಲಸ ಮಾಡಿ ಬಿಲ್ಲವ ಯುವಕರು ಜೈಲು ಸೇರಿದ್ದಾರೆ. ಅವರನ್ನು ಜೈಲಿನಿಂದ ಬಿಡಿಸುವ ಮತ್ತು ಅವರ ಪರವಾಗಿ ವಕಾಲತ್ತು ವಹಿಸುವ ಕೆಲಸವನ್ನೂ ಬಿಜೆಪಿ ಮಾಡುತ್ತಿಲ್ಲ. ಅಮಾಯಕರನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ದ.ಕ. ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಮಿಥುನ್‌ ರೈ ಅವರನ್ನು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಗೂಂಡಾ ಎಂದು ಲೇವಡಿ ಮಾಡಿದ್ದಾರೆ. ಆದರೆ, ಈ ಮೊದಲು ಅಧಿಕಾರದಲ್ಲಿದ್ದಾಗ ಇದೇ ಅಶೋಕ್‌ ಅವರು ಆರೆಸ್ಸೆಸ್‌, ಬಜರಂಗ ದಳ ಕಾರ್ಯಕರ್ತರಿಗೆ ಗೂಂಡಾಗಳೆಂಬ ಪಟ್ಟ ಕಟ್ಟಿದ್ದರು. ಇಲ್ಲಿಯವರೆಗೆ ಆರೆಸ್ಸೆಸ್‌ನ ಗೂಂಡಾಗಳು ಕಾಣಿಸಲಿಲ್ಲವೇ ಎಂದರು.

ಕರಾವಳಿಯಲ್ಲಿ ಈ ಮೊದಲು ಬೆಂಕಿ ಹಚ್ಚುವ ಮಾತುಗಳೇ ಕೇಳಿಬರುತ್ತಿದ್ದವು. ಆದರೆ, ಮೈತ್ರಿ ಸರಕಾರ ಬಂದಾಗಿನಿಂದ ಕರಾವಳಿ ಭಾಗ ಶಾಂತಿಯುತ, ಸೌಹಾರ್ದದಿಂದ ಕೂಡಿದೆ. ಅಧಿಕಾರಿಗಳ ಮೂಲಕ ಸರಕಾರವು ಸೌಹಾರ್ದ ಮೆರೆಯುವಲ್ಲಿ ಯಶಸ್ಸನ್ನು ಕಂಡಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಬೆಂಬಲಿಸಬೇಕಿದೆ. ಕರಾವಳಿ ಪ್ರದೇಶದಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ ಎಂದರು.

ಕಾಂಗ್ರೆಸ್‌ ಮುಖಂಡರಾದ ಸುರೇಶ್‌ ಬಳ್ಳಾಲ್‌, ಟಿ.ಕೆ. ಸುಧೀರ್‌, ಎ.ಸಿ. ವಿನಯರಾಜ್‌, ಜೆಡಿಎಸ್‌ ಮುಖಂಡರಾದ ಮುಹಮ್ಮದ್‌ ಕುಂಞಿ, ಅಕ್ಷಿತ್‌ ಸುವರ್ಣ ಉಪಸ್ಥಿತರಿದ್ದರು.

Vishwa News 24

Recent Posts

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

9 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

23 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

29 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

43 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

24 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago