ಬಿಲ್ಲವ ಸಮಾಜ ಬಾಂಧವರಿಗೆ ನನ್ನಿಂದಾಗಿ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ : ಜಗದೀಶ್ ಅಧಿಕಾರಿ -Vishwanews24

Featured, ದಕ್ಷಿಣ ಕನ್ನಡ

ಬಿಲ್ಲವ ಸಮಾಜ ಬಾಂಧವರಿಗೆ ನನ್ನಿಂದಾಗಿ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ : ಜಗದೀಶ್ ಅಧಿಕಾರಿ -Vishwanews24

ಬಿಲ್ಲವ ಸಮಾಜಕ್ಕೆ ಯಾವುದೇ ರೀತಿಯ ಅಗೌರವ ತೋರಿಲ್ಲ..

ನಾನು ಬಿಜೆಪಿಯಲ್ಲಿದ್ದರೂ ಜನಾರ್ದನ ಪೂಜಾರಿಯವರ ದೊಡ್ಡ ಅಭಿಮಾನಿ..

ಬಿಲ್ಲವ ಸಮಾಜ ಎಂಬುವುದು ನನ್ನ ಹೃದಯ ಭಾಗ ಅವರೊಂದಿಗೆ ಬೆಳೆದವ..

ಮೂಡುಬಿದಿರೆ,: ”ನಾನು ಭಾರತೀಯ ಜನತಾ ಪಾರ್ಟಿಯಲ್ಲಿ ಇದ್ದರೂ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಯವರ ದೊಡ್ಡ ಅಭಿಮಾನಿಯಾಗಿದ್ದು, ಬಿಲ್ಲವ ಸಮಾಜಕ್ಕೆ ಯಾವುದೇ ರೀತಿಯ ಅಗೌರವ ತೋರಿಲ್ಲ. ಆದರೂ ಬಿಲ್ಲವ ಸಮಾಜ ಬಾಂಧವರಿಗೆ ನನ್ನಿಂದಾಗಿ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ” ಎಂದು ಬಿಜೆಪಿ ಮುಖಂಡ ಕೆ.ಪಿ.ಜಗದೀಶ್ ಅಧಿಕಾರಿ ಹೇಳಿದ್ದಾರೆ.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಲದ ಪತ್ರಗಳ ವಿತರಣೆ -Vishwanews24

ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ”ಧರ್ಮ ಆಡಳಿತ ಸಭೆಯಲ್ಲಿ ಯಾವುದೇ ನಿರ್ದಿಷ್ಟ ಧರ್ಮದವರನ್ನು ಕೀಳರಿಮೆಯಿಂದ ಕಾಣುವುದಿಲ್ಲ. ಧರ್ಮ ಜಾತಿ ಪಂಗಡ ಭಾಷೆ ಸಂಸ್ಕೃತಿಯ ವಿಚಾರದಲ್ಲಿ ಭೇದಭಾವ ಮಾಡಿದವನಲ್ಲ. ಗೌರವ ನೀಡುವ ಪರಂಪರೆ ಹೇಗೆ ಮುಂದುವರೆಯುತ್ತದೆ ಎಂಬ ವಿಚಾರವನ್ನು ಧರ್ಮಸಭೆಯಲ್ಲಿ ಹೇಳಿಕೆ ನೀಡಿದ್ದೇನೆ. ನಾನು ಬಿಜೆಪಿಯಲ್ಲಿದ್ದರೂ ಜನಾರ್ದನ ಪೂಜಾರಿಯವರ ದೊಡ್ಡ ಅಭಿಮಾನಿಯಾಗಿದ್ದು, ಬಿಲ್ಲವ ಸಮಾಜದ ಬಾಂಧವರಿಗೆ ಹಲವಾರು ರೀತಿಯ ಸಹಕಾರ ನೀಡುತ್ತ ಬಂದಿದೆ ಎಂದು ತಿಳಿಸಿದರು.

ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ ಖಡ್ಗೇಶ್ವರಿ ದೇವಸ್ಥಾನ : ಉಚಿತ ಕೋವಿಡ್ ಟೆಸ್ಟ್ -Vishwanews24

‘ಈ ವಿಷಯದಿಂದ ನನ್ನ ಮನಸ್ಸಿಗೆ ಅಗಾದ ನೋವುಂಟು ಮಾಡಿದ್ದು, ಯಾರಿಗೂ ಬೇಸರವಾಗಿ ನನಗೆ ಜೀವನ ರಾಜಕೀಯ ಜೀವನ ಬೇಡ ಎಂದಿರುವ ಜಗದೀಶ್ ಅಧಿಕಾರಿ, ನಾನು ಸಲ್ಲೇಖನ ವ್ರತವನ್ನು ತೆಗೆದುಕೊಳ್ಳಲು ಯೋಚನೆ ಮಾಡುತ್ತಿದ್ದೇನೆ. ದೇಹ ತ್ಯಾಗ ಮಾಡಲು ಸಿದ್ಧನಾಗಿರುವ ನಾನು ಮಾಡಿದ ತಪ್ಪಿಗೆ ಕ್ಷಮೆ ಎನ್ನುವುದು ಇಲ್ಲವೇ? ಬಿಲ್ಲವ ಸಮಾಜ ಎಂಬುವುದು ನನ್ನ ಹೃದಯ ಭಾಗ ಅವರೊಂದಿಗೆ ಬೆಳೆದವ ಎಂದು ಹೇಳಿದ್ದಾರೆ.

http://ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆ ಶ್ರೀರಾಮ ಮಂದಿರಕ್ಕಾಗಿ 25 ಲಕ್ಷ ರೂ. ನಿಧಿ ಸಮರ್ಪಣೆ -Vishwanews24

ಜಗದೀಶ್ ಅಧಿಕಾರಿ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯರ ಇತಿಹಾಸವನ್ನು ತಿರುಚಿ ಮಾತನಾಡಿದ್ದಾರೆ ಹಾಗೂ ಮಾಜಿ ಸಚಿವ ಜನಾರ್ದನ ಪೂಜಾರಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಬಿಲ್ಲವ ಸಮಾಜದವರ ಮನಸ್ಸಿಗೆ ಘಾಸಿ ಉಂಟು ಮಾಡಿದ್ದಾರೆ ಎಂಬ ಅವರ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರ ವಿರುದ್ಧ ಬಿಲ್ಲವ ಸಮಾಜದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಮೂಡುಬಿದಿರೆ ಬಿಲ್ಲವ ಸಂಘವು ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.

ನಾಳೆ ಮಂಗಳೂರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ..Vishwanews24