ಮೂಡುಬಿದಿರೆ,: ”ನಾನು ಭಾರತೀಯ ಜನತಾ ಪಾರ್ಟಿಯಲ್ಲಿ ಇದ್ದರೂ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಯವರ ದೊಡ್ಡ ಅಭಿಮಾನಿಯಾಗಿದ್ದು, ಬಿಲ್ಲವ ಸಮಾಜಕ್ಕೆ ಯಾವುದೇ ರೀತಿಯ ಅಗೌರವ ತೋರಿಲ್ಲ. ಆದರೂ ಬಿಲ್ಲವ ಸಮಾಜ ಬಾಂಧವರಿಗೆ ನನ್ನಿಂದಾಗಿ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ” ಎಂದು ಬಿಜೆಪಿ ಮುಖಂಡ ಕೆ.ಪಿ.ಜಗದೀಶ್ ಅಧಿಕಾರಿ ಹೇಳಿದ್ದಾರೆ.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಲದ ಪತ್ರಗಳ ವಿತರಣೆ -Vishwanews24
ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ”ಧರ್ಮ ಆಡಳಿತ ಸಭೆಯಲ್ಲಿ ಯಾವುದೇ ನಿರ್ದಿಷ್ಟ ಧರ್ಮದವರನ್ನು ಕೀಳರಿಮೆಯಿಂದ ಕಾಣುವುದಿಲ್ಲ. ಧರ್ಮ ಜಾತಿ ಪಂಗಡ ಭಾಷೆ ಸಂಸ್ಕೃತಿಯ ವಿಚಾರದಲ್ಲಿ ಭೇದಭಾವ ಮಾಡಿದವನಲ್ಲ. ಗೌರವ ನೀಡುವ ಪರಂಪರೆ ಹೇಗೆ ಮುಂದುವರೆಯುತ್ತದೆ ಎಂಬ ವಿಚಾರವನ್ನು ಧರ್ಮಸಭೆಯಲ್ಲಿ ಹೇಳಿಕೆ ನೀಡಿದ್ದೇನೆ. ನಾನು ಬಿಜೆಪಿಯಲ್ಲಿದ್ದರೂ ಜನಾರ್ದನ ಪೂಜಾರಿಯವರ ದೊಡ್ಡ ಅಭಿಮಾನಿಯಾಗಿದ್ದು, ಬಿಲ್ಲವ ಸಮಾಜದ ಬಾಂಧವರಿಗೆ ಹಲವಾರು ರೀತಿಯ ಸಹಕಾರ ನೀಡುತ್ತ ಬಂದಿದೆ ಎಂದು ತಿಳಿಸಿದರು.
ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ ಖಡ್ಗೇಶ್ವರಿ ದೇವಸ್ಥಾನ : ಉಚಿತ ಕೋವಿಡ್ ಟೆಸ್ಟ್ -Vishwanews24
‘ಈ ವಿಷಯದಿಂದ ನನ್ನ ಮನಸ್ಸಿಗೆ ಅಗಾದ ನೋವುಂಟು ಮಾಡಿದ್ದು, ಯಾರಿಗೂ ಬೇಸರವಾಗಿ ನನಗೆ ಜೀವನ ರಾಜಕೀಯ ಜೀವನ ಬೇಡ ಎಂದಿರುವ ಜಗದೀಶ್ ಅಧಿಕಾರಿ, ನಾನು ಸಲ್ಲೇಖನ ವ್ರತವನ್ನು ತೆಗೆದುಕೊಳ್ಳಲು ಯೋಚನೆ ಮಾಡುತ್ತಿದ್ದೇನೆ. ದೇಹ ತ್ಯಾಗ ಮಾಡಲು ಸಿದ್ಧನಾಗಿರುವ ನಾನು ಮಾಡಿದ ತಪ್ಪಿಗೆ ಕ್ಷಮೆ ಎನ್ನುವುದು ಇಲ್ಲವೇ? ಬಿಲ್ಲವ ಸಮಾಜ ಎಂಬುವುದು ನನ್ನ ಹೃದಯ ಭಾಗ ಅವರೊಂದಿಗೆ ಬೆಳೆದವ ಎಂದು ಹೇಳಿದ್ದಾರೆ.
ಜಗದೀಶ್ ಅಧಿಕಾರಿ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯರ ಇತಿಹಾಸವನ್ನು ತಿರುಚಿ ಮಾತನಾಡಿದ್ದಾರೆ ಹಾಗೂ ಮಾಜಿ ಸಚಿವ ಜನಾರ್ದನ ಪೂಜಾರಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಬಿಲ್ಲವ ಸಮಾಜದವರ ಮನಸ್ಸಿಗೆ ಘಾಸಿ ಉಂಟು ಮಾಡಿದ್ದಾರೆ ಎಂಬ ಅವರ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರ ವಿರುದ್ಧ ಬಿಲ್ಲವ ಸಮಾಜದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಮೂಡುಬಿದಿರೆ ಬಿಲ್ಲವ ಸಂಘವು ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…