ಮೂಡುಬಿದಿರೆ,: ”ನಾನು ಭಾರತೀಯ ಜನತಾ ಪಾರ್ಟಿಯಲ್ಲಿ ಇದ್ದರೂ ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಯವರ ದೊಡ್ಡ ಅಭಿಮಾನಿಯಾಗಿದ್ದು, ಬಿಲ್ಲವ ಸಮಾಜಕ್ಕೆ ಯಾವುದೇ ರೀತಿಯ ಅಗೌರವ ತೋರಿಲ್ಲ. ಆದರೂ ಬಿಲ್ಲವ ಸಮಾಜ ಬಾಂಧವರಿಗೆ ನನ್ನಿಂದಾಗಿ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ” ಎಂದು ಬಿಜೆಪಿ ಮುಖಂಡ ಕೆ.ಪಿ.ಜಗದೀಶ್ ಅಧಿಕಾರಿ ಹೇಳಿದ್ದಾರೆ.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಲದ ಪತ್ರಗಳ ವಿತರಣೆ -Vishwanews24
ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ”ಧರ್ಮ ಆಡಳಿತ ಸಭೆಯಲ್ಲಿ ಯಾವುದೇ ನಿರ್ದಿಷ್ಟ ಧರ್ಮದವರನ್ನು ಕೀಳರಿಮೆಯಿಂದ ಕಾಣುವುದಿಲ್ಲ. ಧರ್ಮ ಜಾತಿ ಪಂಗಡ ಭಾಷೆ ಸಂಸ್ಕೃತಿಯ ವಿಚಾರದಲ್ಲಿ ಭೇದಭಾವ ಮಾಡಿದವನಲ್ಲ. ಗೌರವ ನೀಡುವ ಪರಂಪರೆ ಹೇಗೆ ಮುಂದುವರೆಯುತ್ತದೆ ಎಂಬ ವಿಚಾರವನ್ನು ಧರ್ಮಸಭೆಯಲ್ಲಿ ಹೇಳಿಕೆ ನೀಡಿದ್ದೇನೆ. ನಾನು ಬಿಜೆಪಿಯಲ್ಲಿದ್ದರೂ ಜನಾರ್ದನ ಪೂಜಾರಿಯವರ ದೊಡ್ಡ ಅಭಿಮಾನಿಯಾಗಿದ್ದು, ಬಿಲ್ಲವ ಸಮಾಜದ ಬಾಂಧವರಿಗೆ ಹಲವಾರು ರೀತಿಯ ಸಹಕಾರ ನೀಡುತ್ತ ಬಂದಿದೆ ಎಂದು ತಿಳಿಸಿದರು.
ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ ಖಡ್ಗೇಶ್ವರಿ ದೇವಸ್ಥಾನ : ಉಚಿತ ಕೋವಿಡ್ ಟೆಸ್ಟ್ -Vishwanews24
‘ಈ ವಿಷಯದಿಂದ ನನ್ನ ಮನಸ್ಸಿಗೆ ಅಗಾದ ನೋವುಂಟು ಮಾಡಿದ್ದು, ಯಾರಿಗೂ ಬೇಸರವಾಗಿ ನನಗೆ ಜೀವನ ರಾಜಕೀಯ ಜೀವನ ಬೇಡ ಎಂದಿರುವ ಜಗದೀಶ್ ಅಧಿಕಾರಿ, ನಾನು ಸಲ್ಲೇಖನ ವ್ರತವನ್ನು ತೆಗೆದುಕೊಳ್ಳಲು ಯೋಚನೆ ಮಾಡುತ್ತಿದ್ದೇನೆ. ದೇಹ ತ್ಯಾಗ ಮಾಡಲು ಸಿದ್ಧನಾಗಿರುವ ನಾನು ಮಾಡಿದ ತಪ್ಪಿಗೆ ಕ್ಷಮೆ ಎನ್ನುವುದು ಇಲ್ಲವೇ? ಬಿಲ್ಲವ ಸಮಾಜ ಎಂಬುವುದು ನನ್ನ ಹೃದಯ ಭಾಗ ಅವರೊಂದಿಗೆ ಬೆಳೆದವ ಎಂದು ಹೇಳಿದ್ದಾರೆ.
ಜಗದೀಶ್ ಅಧಿಕಾರಿ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯರ ಇತಿಹಾಸವನ್ನು ತಿರುಚಿ ಮಾತನಾಡಿದ್ದಾರೆ ಹಾಗೂ ಮಾಜಿ ಸಚಿವ ಜನಾರ್ದನ ಪೂಜಾರಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಬಿಲ್ಲವ ಸಮಾಜದವರ ಮನಸ್ಸಿಗೆ ಘಾಸಿ ಉಂಟು ಮಾಡಿದ್ದಾರೆ ಎಂಬ ಅವರ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರ ವಿರುದ್ಧ ಬಿಲ್ಲವ ಸಮಾಜದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಮೂಡುಬಿದಿರೆ ಬಿಲ್ಲವ ಸಂಘವು ಜಗದೀಶ್ ಅಧಿಕಾರಿ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…