ಮಂಗಳೂರು: ರಾಜ್ಯ ಬಜೆಟ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಹೇಳಿ ಬಿಲ್ಲವ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸವನ್ನು ಮುಖ್ಯಮಂತ್ರಿ ಸಹಿತ ರಾಜ್ಯದ ಬಿಲ್ಲವ ಸಚಿವರು ಮಾಡಿದ್ದಾರೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.
ಇತ್ತೀಚೆಗೆ ಬಿಲ್ಲವ ಸಮುದಾಯದ ಮುಖಂಡರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ವೇಳೆ ಮುಂದಿನ ಬಜೆಟ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಘೋಷಣೆ ಮಾಡುವುದಾಗಿ ಹೇಳಿದ್ದರು ಇದಕ್ಕೆ ಜಿಲ್ಲೆಯ ಬಿಲ್ಲವ ಶಾಸಕರು, ಸಚಿವರೂ ಕೂಡ ಸಾಕ್ಷಿಯಾಗಿದ್ದರು ಆದರೆ ನಿನ್ನೆ ಮಂಡಿಸಿದ ಬಜೆಟ್ ನಲ್ಲಿ ಇದರ ಬಗ್ಗೆ ಚಕಾರವೆತ್ತದಿರುವುದು ಸಮುದಾಯಕ್ಕೆ ಬಿಜೆಪಿ ಸರಕಾರ ಮಾಡಿದ ದ್ರೋಹವಾಗಿದೆ. ರಾಜ್ಯ ಸರ್ಕಾರ ಮಾಡಿದ ಈ ಮೋಸಕ್ಕೆ ಮುಂದಿನ ದಿನಗಳಲ್ಲಿ ಬಿಲ್ಲವ ಸಮುದಾಯ ತಕ್ಕ ಉತ್ತರ ನೀಡುತ್ತದೆ.
ಮುಖ್ಯಮಂತ್ರಿಯವರು ಮಂಡಿಸಿದ ಬಜೆಟ್ ನಲ್ಲಿ ಬಿಲ್ಲವ ಸಮುದಾಯ ಮಾತ್ರವಲ್ಲದೆ ಇತರ ಸಮುದಾಯಗಳಾದ ಮೊಗವೀರ ಹಾಗೂ ಹಿಂದುಳಿದ ಸಮುದಾಯಗಳಾಗಲಿ ಯಾರ ಅಭಿವೃದ್ಧಿಗೆ ಬೇಕಾಗುವ ಯಾವುದೇ ಯೋಜನೆಗಳನ್ನು ರೂಪಿಸುವಲ್ಲಿ ವಿಫಲರಾಗಿದ್ದಾರೆ. ಉದ್ಯೋಗದ ಅವಕಾಶಗಳು ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಉದ್ಯೋಗ ಖಾತರಿ ಯೋಜನೆಯನ್ನು ವಿಸ್ತರಿಸದೆ ಇರುವುದು ಖಂಡನೀಯ. ರೈತ ಸಮುದಾಯ, ಕಾರ್ಮಿಕ ವರ್ಗವನ್ನು ಬಜೆಟ್ ನಲ್ಲಿ ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದ್ದು ಚುನಾವಣೆಯನ್ನು ಮುಂದಿಟ್ಟುಕೊಂಡು ಕೇವಲ ಭರವಸೆಗಳಿಗಷ್ಟೇ ಬಜೆಟ್ ಘೋಷಣೆಯನ್ನು ಸೀಮಿತಗೊಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…