ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಮನೆಯಲ್ಲಿಯೇ ಕೊರೊನಾ ಲಸಿಕೆಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲ್ಲೂಕು ವೈದ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಟಿಎಚ್ಒ ಡಾ.ಝಡ್.ಆರ್.ಮಕಾಂದಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 2 ರಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮನೆಯಲ್ಲಿಯೇ ದಂಪತಿಗೆ ವಾಕ್ಸಿನ್ ನೀಡಿದ್ದು ದೊಡ್ಡಮಟ್ಟದ ವಿವಾದವಾಗಿತ್ತು. ಅಲ್ಲದೆ ಮನೆಯಲ್ಲಿಯೇ ಲಸಿಕೆ ನೀಡಿದ್ದಕ್ಕೆ ಹಾವೇರಿಯ ಡಿಎಚ್ಓ ಕಾರಣ ಕೇಳಿ ನೋಟಿಸ್ ನೀಡಿದ್ದರು. ಈಗ ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ.ವಿ.ತ್ರೀಲೋಕಚಂದ್ರ ಸೇವೆಯಿಂದ ಅಮಾನತು ಮಾಡಿ ಆದೇಶ ಮಾಡಿದ್ದಾರೆ.
ಉಡುಪಿ: ಅನಧಿಕೃತ ಮೀನುಗಾರಿಕೆ ನಡೆಸದಂತೆ ಎಚ್ಚರ ವಹಿಸಿ : ಕ್ಯಾಪ್ಟನ್ ಮಣಿವಣ್ಣನ್ ಪಿ -Vishwanews24
ಕೊರೊನಾ ಲಸಿಕೆ ಹಂಚಿಕೆ ಮಾರ್ಗಸೂಚಿಗಳ ಪ್ರಕಾರ ನಿಗದಿಪಡಿಸಿದ ಆಸ್ಪತ್ರೆಗಳಲ್ಲೇ ಲಸಿಕೆಯನ್ನು ನೀಡಬೇಕು. ಆದರೆ ಇಲ್ಲಿ ನಿಯಮ ಉಲ್ಲಂಘನೆ ಆಗಿತ್ತು. ಮಕಾಂದಾರ ಸೂಚನೆಯಂತೆ ಕಿಟ್ ಹೊರಗೆ ತಂದು ಸಚಿವರ ಮನೆಗೆ ತೆರಳಿ ತಾಲೂಕಾಸ್ಪತ್ರೆಯ ಸಿಬ್ಬಂದಿ ಲಸಿಕೆ ಹಾಕಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…