ತಿರುವನಂತಪುರಂ: ಕೇರಳದ ಕಲಾ ಪ್ರಕಾರವಾದ ತೆಯ್ಯಂ ಕಲಾಕೃತಿಯನ್ನು ಕಲಾಕಾರ ವಿವಿಧ ಬಣ್ಣದ ಬಿಸ್ಕೆಟ್ ಬಳಸಿ ರಚಿಸಿದ್ದಾರೆ. ಈ ಕಲಾಕೃತಿಯಲ್ಲಿ ಕೇವಲ ಬಿಸ್ಕೆಟ್ ಮಾತ್ರವಲ್ಲೇ ಬೇಕರಿ ಉತ್ಪನ್ನಗಳನ್ನು ಬಳಸಲಾಗಿದೆ. ಸುಮಾರು 15 ಗಂಟೆಗಳ ಸಮಯ ತೆಗೆದುಕೊಂಡು 24 ಅಡಿ ಉದ್ದದ ಚಿತ್ರವನ್ನು ಕಲಾಕಾರ ಡಾವಿಂಚಿ ಸುರೇಶ್ ರಚಿಸಿದ್ದಾರೆ. ಕಲಾಕಾರನ ಕೈಚಳಕಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಕೇರಳದ ಕಣ್ಣೂರಿನ ಬೇಕರಿ ಅಂಗಡಿಯೊಂದರಲ್ಲಿ ತೆಯ್ಯಂ ಕಲಾಕೃತಿಯನ್ನು ರಚಿಸಲಾಗಿದೆ. ಹಲವು ಟೇಬಲ್ಗಳನ್ನು ಜೋಡಿಸಿ ಅದರ ಮೇಲೆ ಬಿಳಿ ಬಣ್ಣದ ವಸ್ತ್ರವನ್ನಿಟ್ಟು, ಬಳಿಕ ವಿವಿಧ ಬಿಸ್ಕೆಟ್ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ರಚಿಸಲಾಗಿದೆ.
ಈ ಕಲಾಕೃತಿ ಸುಮಾರು 24 ಅಡಿ ಉದ್ದವಿದೆ. ಈ ಚಿತ್ರವನ್ನು ರಚಿಸಲು ಸುಮಾರು 15 ಗಂಟೆಗಳ ಸಮಯ ಹಿಡಿಯಿತು. ಕಲಾಕೃತಿಯನ್ನು ಸಂಪೂರ್ಣಗೊಳಿಸಲು ನನ್ನ ಸ್ನೇಹಿತರು ನನಗೆ ಸಹಾಯ ಮಾಡಿದರು. ಅವರ ಬೆಂಬಲದಿಂದ ಕೆಲಸ ಸುಲಭವಾಯಿತು ಎಂದು ಕಲಾಕಾರ ಸುರೇಶ್ ಹೇಳಿದ್ದಾರೆ. ಈ ಕುರಿತಂತೆ ಇಂಡಿಯಾ ಡಾಟ್ ಕಾಮ್ನಲ್ಲಿ ಉಲ್ಲೇಖಿಸಲಾಗಿದೆ.
ಬೇಕರಿ ಬಾಣಸಿಗ ಮಹಮ್ಮದ್ ರಶೀದ್ ಬೇಕ್ ಸ್ಟೋರಿ – ಬೇಕರಿ ಎಂಬ ಹೊಸ ಯೋಜನೆಯನ್ನು ಯೋಚಿಸಿ, ಈ ಚಿತ್ರವನ್ನು ರಚಿಸುವಂತೆ ಕಲಾಕಾರ ಸುರೇಶ್ ಬಳಿ ಕೇಳಿಕೊಂಡರು. ಬಳಿಕ ಎಲ್ಲರೂ ಸೇರಿ ಬೇಕರಿ ಅಂಗಡಿಯ ಹಾಲ್ನಲ್ಲಿ ಟೇಬಲ್ ಮೇಲೆ ವಿಶಿಷ್ಟ ಕಲಾಕೃತಿಯನ್ನು ರಚಿಸಿದ್ದಾರೆ. ತೆಯ್ಯಂ ಕಲಾಕೃತಿಯನ್ನು ಚಿತ್ರಿಸಲು ಬಿಸ್ಕೆಟ್ಗಳನ್ನು ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಲಾಗಿದೆ ಎಂದು ಮಹಮ್ಮದ್ ರಶೀದ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…