Featured

ಬಿಸ್ಕೆಟ್ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ತೆಯ್ಯಂ ಕಲಾಕೃತಿ ರಚಿಸಿದ ಕೇರಳದ ಕಲಾಕಾರ – Vishwanews24

ಬಿಸ್ಕೆಟ್ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ತೆಯ್ಯಂ ಕಲಾಕೃತಿ ರಚಿಸಿದ ಕೇರಳದ ಕಲಾಕಾರ – Vishwanews24

ತಿರುವನಂತಪುರಂ: ಕೇರಳದ ಕಲಾ ಪ್ರಕಾರವಾದ ತೆಯ್ಯಂ ಕಲಾಕೃತಿಯನ್ನು ಕಲಾಕಾರ ವಿವಿಧ ಬಣ್ಣದ ಬಿಸ್ಕೆಟ್​ ಬಳಸಿ ರಚಿಸಿದ್ದಾರೆ. ಈ ಕಲಾಕೃತಿಯಲ್ಲಿ ಕೇವಲ ಬಿಸ್ಕೆಟ್ ಮಾತ್ರವಲ್ಲೇ ಬೇಕರಿ ಉತ್ಪನ್ನಗಳನ್ನು ಬಳಸಲಾಗಿದೆ. ಸುಮಾರು 15 ಗಂಟೆಗಳ ಸಮಯ ತೆಗೆದುಕೊಂಡು 24 ಅಡಿ ಉದ್ದದ ಚಿತ್ರವನ್ನು ಕಲಾಕಾರ ಡಾವಿಂಚಿ ಸುರೇಶ್ ರಚಿಸಿದ್ದಾರೆ. ಕಲಾಕಾರನ ಕೈಚಳಕಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕೇರಳದ ಕಣ್ಣೂರಿನ ಬೇಕರಿ ಅಂಗಡಿಯೊಂದರಲ್ಲಿ ತೆಯ್ಯಂ ಕಲಾಕೃತಿಯನ್ನು ರಚಿಸಲಾಗಿದೆ. ಹಲವು ಟೇಬಲ್​ಗಳನ್ನು ಜೋಡಿಸಿ ಅದರ ಮೇಲೆ ಬಿಳಿ ಬಣ್ಣದ ವಸ್ತ್ರವನ್ನಿಟ್ಟು, ಬಳಿಕ ವಿವಿಧ ಬಿಸ್ಕೆಟ್​ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ರಚಿಸಲಾಗಿದೆ.

ಈ ಕಲಾಕೃತಿ ಸುಮಾರು 24 ಅಡಿ ಉದ್ದವಿದೆ. ಈ ಚಿತ್ರವನ್ನು ರಚಿಸಲು ಸುಮಾರು 15 ಗಂಟೆಗಳ ಸಮಯ ಹಿಡಿಯಿತು. ಕಲಾಕೃತಿಯನ್ನು ಸಂಪೂರ್ಣಗೊಳಿಸಲು ನನ್ನ ಸ್ನೇಹಿತರು ನನಗೆ ಸಹಾಯ ಮಾಡಿದರು. ಅವರ ಬೆಂಬಲದಿಂದ ಕೆಲಸ ಸುಲಭವಾಯಿತು ಎಂದು ಕಲಾಕಾರ ಸುರೇಶ್ ಹೇಳಿದ್ದಾರೆ. ಈ ಕುರಿತಂತೆ ಇಂಡಿಯಾ ಡಾಟ್ ಕಾಮ್​ನಲ್ಲಿ ಉಲ್ಲೇಖಿಸಲಾಗಿದೆ.

ಬೇಕರಿ ಬಾಣಸಿಗ ಮಹಮ್ಮದ್ ರಶೀದ್ ಬೇಕ್ ಸ್ಟೋರಿ – ಬೇಕರಿ ಎಂಬ ಹೊಸ ಯೋಜನೆಯನ್ನು ಯೋಚಿಸಿ, ಈ ಚಿತ್ರವನ್ನು ರಚಿಸುವಂತೆ ಕಲಾಕಾರ ಸುರೇಶ್ ಬಳಿ ಕೇಳಿಕೊಂಡರು. ಬಳಿಕ ಎಲ್ಲರೂ ಸೇರಿ ಬೇಕರಿ ಅಂಗಡಿಯ ಹಾಲ್​ನಲ್ಲಿ ಟೇಬಲ್ ಮೇಲೆ ವಿಶಿಷ್ಟ ಕಲಾಕೃತಿಯನ್ನು ರಚಿಸಿದ್ದಾರೆ. ತೆಯ್ಯಂ ಕಲಾಕೃತಿಯನ್ನು ಚಿತ್ರಿಸಲು ಬಿಸ್ಕೆಟ್​ಗಳನ್ನು ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಲಾಗಿದೆ ಎಂದು ಮಹಮ್ಮದ್ ರಶೀದ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಉಡುಪಿ ಅನೀರಿಕ್ಷಿತ ಮಳೆ: ಕೃತಕ ನೆರೆ ಸೃಷ್ಟಿ, ಮನೆಗಳಿಗೆ ನುಗ್ಗಿದ ನೆರೆ ; ಇನ್ನೂ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ – Vishwanews24

Vishwa News 24

Recent Posts

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

38 minutes ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago