ತಿರುವನಂತಪುರಂ: ಕೇರಳದ ಕಲಾ ಪ್ರಕಾರವಾದ ತೆಯ್ಯಂ ಕಲಾಕೃತಿಯನ್ನು ಕಲಾಕಾರ ವಿವಿಧ ಬಣ್ಣದ ಬಿಸ್ಕೆಟ್ ಬಳಸಿ ರಚಿಸಿದ್ದಾರೆ. ಈ ಕಲಾಕೃತಿಯಲ್ಲಿ ಕೇವಲ ಬಿಸ್ಕೆಟ್ ಮಾತ್ರವಲ್ಲೇ ಬೇಕರಿ ಉತ್ಪನ್ನಗಳನ್ನು ಬಳಸಲಾಗಿದೆ. ಸುಮಾರು 15 ಗಂಟೆಗಳ ಸಮಯ ತೆಗೆದುಕೊಂಡು 24 ಅಡಿ ಉದ್ದದ ಚಿತ್ರವನ್ನು ಕಲಾಕಾರ ಡಾವಿಂಚಿ ಸುರೇಶ್ ರಚಿಸಿದ್ದಾರೆ. ಕಲಾಕಾರನ ಕೈಚಳಕಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಕೇರಳದ ಕಣ್ಣೂರಿನ ಬೇಕರಿ ಅಂಗಡಿಯೊಂದರಲ್ಲಿ ತೆಯ್ಯಂ ಕಲಾಕೃತಿಯನ್ನು ರಚಿಸಲಾಗಿದೆ. ಹಲವು ಟೇಬಲ್ಗಳನ್ನು ಜೋಡಿಸಿ ಅದರ ಮೇಲೆ ಬಿಳಿ ಬಣ್ಣದ ವಸ್ತ್ರವನ್ನಿಟ್ಟು, ಬಳಿಕ ವಿವಿಧ ಬಿಸ್ಕೆಟ್ ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಿ ರಚಿಸಲಾಗಿದೆ.
ಈ ಕಲಾಕೃತಿ ಸುಮಾರು 24 ಅಡಿ ಉದ್ದವಿದೆ. ಈ ಚಿತ್ರವನ್ನು ರಚಿಸಲು ಸುಮಾರು 15 ಗಂಟೆಗಳ ಸಮಯ ಹಿಡಿಯಿತು. ಕಲಾಕೃತಿಯನ್ನು ಸಂಪೂರ್ಣಗೊಳಿಸಲು ನನ್ನ ಸ್ನೇಹಿತರು ನನಗೆ ಸಹಾಯ ಮಾಡಿದರು. ಅವರ ಬೆಂಬಲದಿಂದ ಕೆಲಸ ಸುಲಭವಾಯಿತು ಎಂದು ಕಲಾಕಾರ ಸುರೇಶ್ ಹೇಳಿದ್ದಾರೆ. ಈ ಕುರಿತಂತೆ ಇಂಡಿಯಾ ಡಾಟ್ ಕಾಮ್ನಲ್ಲಿ ಉಲ್ಲೇಖಿಸಲಾಗಿದೆ.
ಬೇಕರಿ ಬಾಣಸಿಗ ಮಹಮ್ಮದ್ ರಶೀದ್ ಬೇಕ್ ಸ್ಟೋರಿ – ಬೇಕರಿ ಎಂಬ ಹೊಸ ಯೋಜನೆಯನ್ನು ಯೋಚಿಸಿ, ಈ ಚಿತ್ರವನ್ನು ರಚಿಸುವಂತೆ ಕಲಾಕಾರ ಸುರೇಶ್ ಬಳಿ ಕೇಳಿಕೊಂಡರು. ಬಳಿಕ ಎಲ್ಲರೂ ಸೇರಿ ಬೇಕರಿ ಅಂಗಡಿಯ ಹಾಲ್ನಲ್ಲಿ ಟೇಬಲ್ ಮೇಲೆ ವಿಶಿಷ್ಟ ಕಲಾಕೃತಿಯನ್ನು ರಚಿಸಿದ್ದಾರೆ. ತೆಯ್ಯಂ ಕಲಾಕೃತಿಯನ್ನು ಚಿತ್ರಿಸಲು ಬಿಸ್ಕೆಟ್ಗಳನ್ನು ಮತ್ತು ಬೇಕರಿ ಉತ್ಪನ್ನಗಳನ್ನು ಬಳಸಲಾಗಿದೆ ಎಂದು ಮಹಮ್ಮದ್ ರಶೀದ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…
ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…
ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…
ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…