ಬೆಂಗಳೂರು: ಬಿಹಾರದಲ್ಲಿ NDA ಅಧಿಕಾರಕ್ಕೆ ಬಂದರೆ ಅದು ನಮ್ಮ ದೇಶದ, ಬಿಹಾರ ಜನರ ದುರಾದೃಷ್ಟ ಅಂತ ಸಚಿವ ರಾಮಲಿಂಗಾ ರೆಡ್ಡಿ ಬೇಸರ ಹೊರಹಾಕಿದರು.
ಬಿಹಾರ ಚುನಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ಸಮೀಕ್ಷೆಯಲ್ಲಿ NDA ಮುನ್ನಡೆ ಕೊಡಲಾಗಿದೆ. ಒಂದು ವೇಳೆ ಬಿಹಾರದಲ್ಲಿ NDA ಬಂದ್ರೆ ಅದು ನಮ್ಮ ದೇಶದ, ಬಿಹಾರ ಜನರ ದುರಾದೃಷ್ಟ. ಬಿಹಾರದಲ್ಲಿ 20 ವರ್ಷಗಳಿಂದ NDA ಅವರು ಆಡಳಿತ ಮಾಡ್ತಿದ್ದಾರೆ. ಆದರೂ ಬಿಹಾರ ಅಭಿವೃದ್ಧಿ ಆಗಿಲ್ಲ. ಬಿಜೆಪಿ ಬಂದ ಮೇಲೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಜಾಸ್ತಿ ಆಗ್ತಿದೆ. ಕೇಂದ್ರ ಸರ್ಕಾರ ಯಾಕೆ ಗಮನ ಕೊಡ್ತಿಲ್ಲ ಅಂತ ಕಿಡಿಕಾರಿದರು.
ಬಿಹಾರದ ಜನರು ಬೆಂಗಳೂರಿಗೆ ಬಂದು ಕೆಲಸ ಮಾಡ್ತಿದ್ದಾರೆ. ಅಲ್ಲಿ ಕೆಲಸ ಸಿಗದೇ ಇರೋದಕ್ಕೆ ಬರ್ತಿದ್ದಾರೆ. ಇದು ಅಭಿವೃದ್ಧಿ ಅಗ್ತಿಲ್ಲ ಅನ್ನೋದಕ್ಕೆ ಉದಾಹರಣೆ. ಬಿಹಾರ ರಾಜ್ಯ ಅಭಿವೃದ್ಧಿ ಆಗಿಲ್ಲ. ನಿರುದ್ಯೋಗ ಜಾಸ್ತಿ ಆಗಿದೆ. ಒಂದು ವೇಳೆ NDA ಅಧಿಕಾರಕ್ಕೆ ಬಂದ್ರೆ ಅದು ಬಿಹಾರ ಜನರ ದುರಾದೃಷ್ಟ ಅಂತ ಲೇವಡಿ ಮಾಡಿದರು.
ಇನ್ನೂ ಕಾಂಗ್ರೆಸ್ ಸರ್ವನಾಶ ಆಗುತ್ತೆ ಎಂಬ ಮಾಜಿ ಸಚಿವ ರಾಜಣ್ಣ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತದೆ ಎಂದು ನುಡಿದರು.
ನಾವು ಅಭಿವೃದ್ದಿ ಕೆಲಸ ಮಾಡಿದ್ದೇವೆ, ಅದು ನಮಗೆ ಶ್ರೀರಕ್ಷೆ. ಬಿಜೆಪಿ-ಜೆಡಿಎಸ್ ವಿಪಕ್ಷದಲ್ಲಿ ನಾಯಕತ್ವ ಕೊರತೆ ಇದೆ. ಬಿಜೆಪಿ ಸೊರಗಿ ಹೋಗ್ತಿದೆ. ಬಿಜೆಪಿಗೆ ಈಗ ಇರೋ ಸ್ಥಾನವೂ ಮುಂದಿನ ಚುನಾವಣೆಯಲ್ಲಿ ಬರೊಲ್ಲ. ನಮ್ಮ ಪಕ್ಷ 136 ಸ್ಥಾನಕ್ಕಿಂತ ಜಾಸ್ತಿ ಸ್ಥಾನ ಬರ್ತೀವಿ ಎಂದರು. ಇದೇ ವೇಳೆ 2028ಕ್ಕೆ ರಾಮಲಿಂಗಾರೆಡ್ಡಿ ಸಿಎಂ ಸ್ಥಾನದ ಆಕಾಂಕ್ಷಿ ಆಗ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ನಾನು ಯಾವತ್ತೂ ಸಿಎಂ ಆಗೊಲ್ಲ ಎಂದರು.
ನವೆಂಬರ್ ಕ್ರಾಂತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯಾವ ಕ್ರಾಂತಿಯೂ ಇಲ್ಲ ಏನೂ ಇಲ್ಲ. ಬಿಜೆಪಿ ಅವರು ಸುಳ್ಳು ಮಾಹಿತಿ ಕೊಡ್ತಾರೆ. ನೀವು ತೋರಿಸ್ತೀರಾ ಅದಕ್ಕೆ ಬಿಜೆಪಿ ಅವರು ಮಾತಾಡ್ತಾರೆ. ಯಾವ ಕ್ರಾಂತಿಯೂ ಇಲ್ಲ ಅಂತ ಕುಟುಕಿದರು
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…