KPCC President, Dinesh Gundu Rao addressing press media at KPCC office, in Bengaluru on Wednesday 3rd April 2019 Pics: www.pics4news.com
ಮಂಗಳೂರು: ಚುನಾವಣೆ ಘೋಷಣೆಯಾಗಲು ನಾಲ್ಕು ದಿನವಿದ್ದಾಗ 10 ಸಾವಿರ ಹಣ ಮಹಿಳೆಯರ ಖಾತೆಗೆ ಹಾಕಲಾಗಿದೆ. ಸರ್ಕಾರದ ದುಡ್ಡಲ್ಲಿ ಎನ್ಡಿಎ ಮತ ಖರೀದಿ ಮಾಡಿದೆ. ಚುನಾವಣಾ ಆಯೋಗ ಇದಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದರು.
ಬಿಹಾರ ಚುನಾವಣೆ ಫಲಿತಾಂಶ ನವೆಂಬರ್ ಕ್ರಾಂತಿ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ಬಿಹಾರ ಚುನಾವಣೆಗೂ ನವೆಂಬರ್ ಕ್ರಾಂತಿಗೂ ಯಾವುದೇ ಸಂಬಂಧವಿಲ್ಲ. ನವೆಂಬರ್ ಕ್ರಾಂತಿ ಎಲ್ಲಿಂದಲೋ ಸೃಷ್ಟಿಯಾಗಿತ್ತು. ಅದಕ್ಕೆ ಯಾವುದೇ ಆಧಾರಗಳಿಲ್ಲ. ಚುನಾವಣೆಗೂ ನಮ್ಮ ರಾಜ್ಯದ ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಬಿಹಾರ ಚುನಾವಣೆಯನ್ನು ಹತ್ತಿರದಿಂದ ನೋಡಿದ್ದಾರೆ. ಚುನಾವಣಾ ಆಯೋಗ ಬಿಜೆಪಿಯವರಿಗೆ ಅನುಕೂಲ ಮಾಡಿಕೊಟ್ಟಿದನ್ನು ನೋಡಿದ್ದೇವೆ ಎಂದರು.
ಮುಂದೆ ಎಲ್ಲರೂ ಇದನ್ನೇ ಮಾಡುವುದಕ್ಕೆ ಶುರು ಮಾಡಿದ್ರೆ.?. ಚುನಾವಣೆ ಹತ್ತಿರವಿದ್ದಾಗ ಯಾವುದೋ ಯೋಜನೆ ಘೋಷಣೆ ಮಾಡ್ತಾರೆ. 10,20,30 ಸಾವಿರ ಕೊಟ್ಟಲ್ಲಿ ನ್ಯಾಯಯುತ ಚುನಾವಣೆ ಎಂದು ಹೇಗೆ ಹೇಳಲಾಗುತ್ತದೆ. ಚುನಾವಣೆ ಆಯೋಗ ಯಾಕೆ ಕ್ರಮ ತಗೊಂಡಿಲ್ಲ. ಚುನಾವಣೆ ದಿನಾಂಕಕ್ಕೂ ಇವರಿಗೂ ಹೊಂದಾಣಿಕೆ ಮಾಡಿಕೊಂಡು ಘೋಷಣೆ ಮಾಡಿದ್ದಾರೆ. ಮತ ಖರೀದಿಗೆ ಚುನಾವಣೆ ಆಯೋಗವೂ ಸಹಾಯ ಮಾಡಿದೆ. ರಾಜಕೀಯ ಪಕ್ಷ ಜನರ ದುಡ್ಡಲ್ಲಿ ಈ ರೀತಿ ಮಾಡಿದ್ರೆ ಯಾವ ನೈತಿಕತೆಯಿದೆ. ಎಲ್ಲಾ ರೀತಿಯ ಅಸ್ತ್ರಗಳನ್ನು ಕೇಂದ್ತ ಸರ್ಕಾರ, ಬಿಜೆಪಿ ಉಪಯೋಗಿಸಿದೆ ಎಂದರು.
ಚುನಾವಣೆ ಸೋಲಿನಲ್ಲೂ ನಮ್ಮ ವೈಫಲ್ಯವೂ ಇದೆ. ಸೋಲನ್ನು ಇನ್ನೊಬ್ಬರ ತಪ್ಪು ಎಂದು ಹೇಳಬಾರದು. ಮಹಾಘಟ್ ಬಂಧನ್, ಸೀಟು ವಿತರಣೆಯಲ್ಲಿ ಗೊಂದಲ, ಮುಖ್ಯಮಂತ್ರಿ ಘೋಷಣೆ ಮಾಡುವಲ್ಲಿ ಸಮಸ್ಯೆ ಆಗಿತ್ತು. ಇದೆಲ್ಲವನ್ನು ಆತ್ಮಾವಲೋಕನ ಮಾಡಬೇಕು. ಇದನ್ನು ಕೇಂದ್ರದವರು ಮಾಡ್ತಾರೆ.ಈ ಸೋಲನ್ನು ನಾವು ಒಪ್ಪಿಕೊಳ್ಳಬೇಕು. ಜನ ತಿರಸ್ಕಾರ ಮಾಡಿದನ್ನು ನಾವು ಒಪ್ಪಿಕೊಳ್ಳಬೇಕು ಎಂದರು.
ಆದದೆ ಸರ್ಕಾರದ ಯಂತ್ರವನ್ನು, ಸಂಸ್ಥೆಯನ್ನು ದುರುಪಯೋಗ ಮಾಡಿರೋದು ಸಹ ಇದೆ. ಅಕ್ಕಪಕ್ಕದ ರಾಜ್ಯಗಳಿಂದ ಬಿಹಾರಕ್ಕೆ ವಿಶೇಷ ಸೌಲಭ್ಯಗಳನ್ನು ಮಾಡಿ ರೈಲು ಕಳುಹಿಸಿಕೊಟ್ಟಿದ್ದಾರೆ. ಈ ರೀತಿ ಎಲ್ಲಾ ಮಾಡಿದ್ರೆ ನಾವು ಏನು ಹೇಳುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…