ಕಾಂಗ್ರೆಸ್ ಪಕ್ಷ ದೇಶದಾದ್ಯಂತ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ದೇಶದ ಜನತೆಗೆ ಸುಳ್ಳು ಮಾಹಿತಿ ನೀಡಿ ಮಾಡಿದ ವೋಟ್ ಚೋರಿ ಆರೋಪಕ್ಕೆ ಬಿಹಾರ ಜನತೆ ಬಿಜೆಪಿ ಹಾಗೂ ಎನ್ ಡಿ ಎ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ತಕ್ಕ ಉತ್ತರ ನೀಡಿ ಸುಳ್ಳು ಆರೋಪದ ವಿರುದ್ಧ ಸ್ಪಷ್ಟ ಸಂದೇಶ ರವಾನಿಸಿದ ಬಿಹಾರ ಜನತೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.
ದೇಶದ ಚುನಾವಣಾ ಆಯೋಗ ಹಾಗೂ ಚುನಾವಣೆ ವ್ಯವಸ್ಥೆಯ ಮೇಲೆಯೇ ಧಕ್ಕೆ ತರುವ ಪ್ರಯತ್ನ ಮಾಡುವ ಮೂಲಕ ವಿಶ್ವಕ್ಕೆ ಮಾದರಿಯಾಗಿರುವ ಪ್ರಜಾಪ್ರಭುತ್ವ ದೇಶದ ಮತದಾನ ಪ್ರಕ್ರಿಯೆಯನ್ನು ಅನುಮಾನಿಸುವ ರೀತಿಯಲ್ಲಿ ಬಿಂಬಿಸಿದ ಕಾಂಗ್ರೆಸ್ ಪಕ್ಷಕ್ಕೆ ಬಿಹಾರದಲ್ಲಿನ ಹೀನಾಯ ಸೋಲು ತಕ್ಕ ಉತ್ತರ ನೀಡಿದೆ.
ಉಡುಪಿ ಜಿಲ್ಲೆಯಲ್ಲಿಯೂ ವೋಟ್ ಚೋರಿ ಅಭಿಯಾನ ನಡೆಸಿ ಉಡುಪಿ ಜನತೆಯನ್ನು ದಾರಿ ತಪ್ಪಿಸಲು ಹೊರಟ ಕಾಂಗ್ರೆಸ್ ಪಕ್ಷದ ಅಪ್ರಬುದ್ಧ ನಾಯಕರಿಗೆ ಮಸಿ ಬಳಿದಂತಾಗಿದ್ದು, ಬಿಹಾರ ಫಲಿತಾಂಶ ರಾಜ್ಯ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…