Featured

ಬಿಹಾರ :ಸಾಲಗಾರರ ಕಿರಿ ಕಿರಿ – ಕುಟುಂಬದ 6 ಮಂದಿ ವಿಷ ಸೇವಿಸಿ  ಆತ್ಮಹತ್ಯೆ, ಓರ್ವಳ ಸ್ಥಿತಿ ಗಂಭೀರ – Vishwanews24

ಬಿಹಾರ  :ಸಾಲಗಾರರ ಕಿರಿ ಕಿರಿ – ಕುಟುಂಬದ 6 ಮಂದಿ ವಿಷ ಸೇವಿಸಿ  ಆತ್ಮಹತ್ಯೆ, ಓರ್ವಳ ಸ್ಥಿತಿ ಗಂಭೀರ

ಬಿಹಾರ: ಬಿಹಾರದ ನವಾಡ ನಗರದ ಆದರ್ಶ ಸೊಸೈಟಿ ಬಳಿ ವ್ಯಾಪಾರಿಯೊಬ್ಬರು ತಮ್ಮ ಕುಟುಂಬ 6 ಸದಸ್ಯರೊಂದಿಗೆ ಸಾಮೂಹಿಕವಾಗಿ ವಿಷ ಸೇವಿಸಿದ್ದು ಘಟನೆಯಲ್ಲಿ ಮೂವರು ಮಕ್ಕಳು ಸೇರಿ ಐದು ಮಂದಿ ಸಾವನ್ನಪ್ಪಿದ್ದು, ಓರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ.

ಈ ಘಟನೆಯಲ್ಲಿ ಕೇದಾರನಾಥ ಗುಪ್ತಾ, ಪತ್ನಿ ಅನಿತಾ ದೇವಿ, ಇಬ್ಬರು ಪುತ್ರಿಯರಾದ ಶಬನಮ್ ಕುಮಾರಿ, ಗುಡಿಯಾ ಕುಮಾರಿ ಮತ್ತು ಪುತ್ರ ಪ್ರಿನ್ಸ್ ಕುಮಾರ್ ಮೃತಪಟ್ಟಿದ್ದಾರೆ. ಇನ್ನೋರ್ವ ಮಗಳು ಸಾಕ್ಷಿ ಕುಮಾರಿ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೇದಾರನಾಥ ಗುಪ್ತಾ ಅವರು ಮೂಲತಃ ರಾಜೌಲಿ ನಿವಾಸಿಯಾಗಿದ್ದು, ನಾವಡಾದ ನ್ಯೂ ಏರಿಯಾದಲ್ಲಿ ವಾಸಿಸುತ್ತಿದ್ದರು ಮತ್ತು ವಿಜಯ್ ಬಜಾರ್‌ನಲ್ಲಿ ಹಣ್ಣಿನ ಅಂಗಡಿಯನ್ನು ನಡೆಸುತ್ತಿದ್ದರು ಎಂದು ಹೇಳಲಾಗಿದೆ.

ತಂದೆ ಸಾಲ ಮಾಡಿದ್ದು, ಸಾಲಗಾರರ ಕಿರಿ ಕಿರಿ ಹೆಚ್ಚಾಗಿ ತಂದೆ ತೀವ್ರ ಖಿನ್ನತೆಗೆ ಒಳಗಾಗಿದ್ದರು ಎಂದು ಕೇದಾರನಾಥ ಅವರ ಮಗಳು ಸಾಕ್ಷಿ ಕುಮಾರಿ ತಿಳಿಸಿದ್ದಾರೆ.

ಬಂಟ್ವಾಳ: ಕೆಲಸವೊಂದರ ಇಂಟರ್‌ವ್ಯೂ ಇದೆ ಎಂದು ಹೇಳಿ ಮನೆಯಿಂದ ಹೋದ ಯುವತಿ ನಾಪತ್ತೆ – Vishwanews24

ಎಲ್ಲರೂ ತಂದೆಗೆ ಕಿರುಕುಳ ನೀಡುತ್ತಿದ್ದರು. ಹಣ ಕೇಳುತ್ತಿದ್ದರು… ಬೆದರಿಕೆ ಹಾಕುತ್ತಿದ್ದರು. ಸಾಲ ತೀರಿಸಲಾಗದೆ ಕುಟುಂಬದವರೆಲ್ಲ ಸೇರಿ ವಿಷ ಸೇವಿಸಲು ನಿರ್ಧರಿಸಿದ್ದು ಎಂದು ಹೇಳಿದ್ದಾಳೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಣಕ್ಕಾಗಿ ತಂದೆಗೆ ಕಿರುಕುಳ ನೀಡುತ್ತಿದ್ದ ಕೆಲವರ ಹೆಸರನ್ನೂ ಸಾಕ್ಷಿ ನೀಡಿದ್ದಾರೆ.

ನಾನು ಹೇಳಿದ್ದ ಹೇಳಿಕೆ ಹಿಂದೆ ಪಡೆಯುತ್ತಿದ್ದೇನೆ.. ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ : ಸತೀಶ್ ಜಾರಕಿಹೊಳಿ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago