ಕೊಪ್ಪಳ : ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಕೇವಲ 6 ತಿಂಗಳು ಮಾತ್ರ ಇರುತ್ತೆ ಎಂದು ಕುಷ್ಟಗಿ ಕಾಂಗ್ರೆಸ್ ಶಾಸಕ ಅಮರೇಗೌಡ ಭವಿಷ್ಯ ನುಡಿದಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅಮರೇಗೌಡ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೇವಲ 6 ತಿಂಗಳು ಮಾತ್ರ ಇರುತ್ತೆ. ಬಿಜೆಪಿಯವರು ಲೂಟಿ ಮಾಡಿ ಮನೆಗೆ ಹೋಗ್ತಾರೆ, ಅಥವಾ ಅವರೇ ಬಡಿದಾಡಿಕೊಂಡು ಮನೆಗೆ ಹೋಗ್ತಾರೆ ಎಂದು ಹೇಳಿದರು.
ಬೆಳಗಾವಿಯವರು ಈಗ ಆರಂಭ ಮಾಡಿದ್ದಾರೆ. ಅವರೇ ಕೊನೆ ಮಾಡುತ್ತಾರೆ ಇಂದು ಸಂಜೆ ಒಳಗೆ ಏನೆಲ್ಲಾ ಆಗುತ್ತೆ ಎನ್ನುವುದನ್ನು ನೋಡಿ ಎಂದು ಬಿಜೆಪಿ ಸರ್ಕಾರದ ಆಯುಷ್ಯದ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಇನ್ನು ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಬಂದು 25 ದಿನಗಳ ಬಳಿಕ ಸಂಪುಟ ವಿಸ್ತರಣೆ ಕುತೂಹಲಕ್ಕೆ ಇಂದು ತೆರೆ ಬಿದ್ದಿದ್ದು, ರಾಜಭವನದ ಗಾಜಿನಮನೆಯಲ್ಲಿ ಸಚಿವ ಸಂಪುಟದ ಹೊಸ 17 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…