ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದತೆ ಆರಂಭಿಸಿರುವ ಬಿಜೆಪಿ ರಾಜ್ಯದಲ್ಲಿ ಕಮಲಜ್ಯೋತಿ ಅಭಿಯಾನಕ್ಕೆ ಚಾಲನೆ ನೀಡಿತು. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ವೈ ನಿವಾಸ ಮುಂಭಾಗದಲ್ಲಿ ರಂಗೋಲಿಯಿಂದ ಬಿಡಿಸಿದ ಕಮಲ ಚಿತ್ರದಲ್ಲಿ ದೀಪ ಬೆಳಗಿಸೋ ಮೂಲಕ ಕಮಲಜ್ಯೋತಿ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಾಯಿತು..
ಬೆಂಗಳೂರಿನಲ್ಲಿ ಕೇಂದ್ರ ಸರಕಾರದ ಯೋಜನೆಗಳ ಫಲಾನುಗಳ ಮನೆಗಳಿಗೆ ಪಕ್ಷದ ಮುಖಂಡರೊಂದಿಗೆ ಭೇಟಿ ನೀಡಿ ದೀಪ ಹಚ್ಚಿದರು. ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸುವ ಮೂಲಕ ಕಮಲ ದೀಪ ಹಚ್ಚೋಣ, ಮತ್ತೊಮ್ಮೆ ಮೋದಿ ಸರಕಾರ ಅಧಿಕಾರಕ್ಕೆ ತರುವ ಸಂಕಲ್ಪ ಮಾಡೋಣ ಎಂದು ಬಿಎಸ್ ವೈ ಇದೇ ವೇಳೆ ತಿಳಿಸಿದರು.
ಬಳಿಕ ಯಡಿಯೂರಪ್ಪ ಅವರು ಮನೆ ಮನೆಗೆ ತೆರಳಿ ದೀಪ ಹಚ್ಚಿದರು. ಈ ವೇಳೆ ಬಿಎಸ್ವೈ ಅವರನ್ನು ಮಹಿಳೆಯರು ಮತ್ತು ಮಕ್ಕಳು ಆರತಿ ಎತ್ತಿ ಸ್ವಾಗತಿಸಿದರು. ಮಕ್ಕಳು ಕಮಲ ನೀಡಿ ಸ್ವಾಗತಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಜನಪರ ಕಾರ್ಯಕರ್ಮಗಳ ಬಗ್ಗೆ ಜನರಿಗೆ ತಿಳಿಸಿಕೊಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ದೇಶದಲ್ಲಿ ಮತ್ತೊಮ್ಮೆ ಕಮಲ ಜ್ಯೋತಿ ಬೆಳಗಲಿದೆ ಎಂದು ಹೇಳಿದರು..
ಬೆಂಗಳೂರಿನ ರಾಧಾಕೃಷ್ಣ ದೇವಸ್ಥಾನ ಸಂಜಯ್ ನಗರ, ಹೆಬ್ಬಾಳ ಬಳಿ ಮಹಿಳಾ ಕಾರ್ಯಕರ್ತರಿಂದ ‘ಕಮಲ ಜ್ಯೋತಿ’ ರಂಗೋಲಿ ಚಿತ್ತಾರದಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಭಾಗಿಯಾದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…